ನಾಗರಕೆರೆಯಲ್ಲಿ ಮೀನುಗಳು ಸಾವು ವಿಚಾರ: ಸ್ಥಳಕ್ಕೆ ಶಾಸಕ ಧೀರಜ್‌ ಮುನಿರಾಜ್ ಭೇಟಿ ಪರಿಶೀಲನೆ

ದೊಡ್ಡಬಳ್ಳಾಪುರ:ನಗರದ ಹೃದಯಭಾಗದ ನಾಗರಕೆರೆಯಲ್ಲಿ ನೂರಾರು ಮೀನುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ನಗರದಲ್ಲಿ ಶನಿವಾರ ಸಂಜೆ ಬಿದ್ದ ಮಳೆಯಲ್ಲಿ ಕಲುಷಿತ ನೀರು ನಾಗರಕೆರೆ ಅಂಗಳ ಸೇರಿದ್ದರಿಂದ ಕೆರೆಯಲ್ಲಿದ್ದ ಮೀನುಗಳು ಮೃತಪಟ್ಟು ತೇಲಿಕೊಂಡು ದಡಕ್ಕೆ ಬಂದಿವೆ ಎಂದು ಶಂಕಿಸಲಾಗಿದೆ.

ನಾಗರಕೆರೆ ಅಂಗಳದಲ್ಲೇ ಒಳಚರಂಡಿ ಪೈಪ್ ಲೈನ್ ಹಾಕಲಾಗಿದೆ. ಈ ನೀರಿನ ಸೋರಿಕೆಯಿಂದಲೂ ಕೆರೆಯಲ್ಲಿನ ನೀರು ಕಲುಷಿತವಾಗಿ ಮೀನುಗಳ ಸಾವಿಗೆ ಕಾರಣವಾಗಿದೆ ಎನ್ನಲಾಗಿದೆ.

ಇದಲ್ಲದೆ ನಗರಸಭೆ ವ್ಯಾಪ್ತಿಯಿಂದ ಶನಿವಾರ ಮುಂಗಾರು ಪೂರ್ವ ಮೊದಲ ಮಳೆ ಬಿದ್ದಿದ್ದರಿಂದ ರಸ್ತೆಗಳಲ್ಲಿನ ಹಾಗೂ ಚರಂಡಿಗಳಲ್ಲಿನ ಮಳೆಗಾಲದಿಂದಲೂ ನಿಂತಿದ್ದ ಕೊಚ್ಚೆಹರಿದು ಕೆರೆ ಅಂಗಳ ಸೇರಿದೆ. ಈ ಎಲ್ಲಾ ಕಾರಣಗಳಿಂದ ಮೀನು ಮೃತಪಟ್ಟರಬಹುದು ಎಂದು ಪರಿಸರವಾದಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ನಾಗರಕೆರೆ ಯಲ್ಲಿನ ಮ್ಯಾನ್‌ ಹೋಲ್ ತೆರವು ಮಾಡಬೇಕು. ಕೆರೆಯ ಪುನಶ್ವೇತನಗೊಳಿಸಿ, ಮಲಿನ ನೀರು ಕೆರೆ ಸೇರದಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆ ಇಂದು ಶಾಸಕ ಧೀರಜ್ ಮುನಿರಾಜ್ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸ್ವಚ್ಛತಾ ಕಾರ್ಯ ಹಾಗೂ ಮೀನುಗಳ ಉಳಿವಿಗೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

6 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

19 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

19 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

22 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

23 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago