ನಾಗರಕೆರೆಯಲ್ಲಿ ಮೀನುಗಳು ಸಾವು ವಿಚಾರ: ಸ್ಥಳಕ್ಕೆ ಶಾಸಕ ಧೀರಜ್‌ ಮುನಿರಾಜ್ ಭೇಟಿ ಪರಿಶೀಲನೆ

ದೊಡ್ಡಬಳ್ಳಾಪುರ:ನಗರದ ಹೃದಯಭಾಗದ ನಾಗರಕೆರೆಯಲ್ಲಿ ನೂರಾರು ಮೀನುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ನಗರದಲ್ಲಿ ಶನಿವಾರ ಸಂಜೆ ಬಿದ್ದ ಮಳೆಯಲ್ಲಿ ಕಲುಷಿತ ನೀರು ನಾಗರಕೆರೆ ಅಂಗಳ ಸೇರಿದ್ದರಿಂದ ಕೆರೆಯಲ್ಲಿದ್ದ ಮೀನುಗಳು ಮೃತಪಟ್ಟು ತೇಲಿಕೊಂಡು ದಡಕ್ಕೆ ಬಂದಿವೆ ಎಂದು ಶಂಕಿಸಲಾಗಿದೆ.

ನಾಗರಕೆರೆ ಅಂಗಳದಲ್ಲೇ ಒಳಚರಂಡಿ ಪೈಪ್ ಲೈನ್ ಹಾಕಲಾಗಿದೆ. ಈ ನೀರಿನ ಸೋರಿಕೆಯಿಂದಲೂ ಕೆರೆಯಲ್ಲಿನ ನೀರು ಕಲುಷಿತವಾಗಿ ಮೀನುಗಳ ಸಾವಿಗೆ ಕಾರಣವಾಗಿದೆ ಎನ್ನಲಾಗಿದೆ.

ಇದಲ್ಲದೆ ನಗರಸಭೆ ವ್ಯಾಪ್ತಿಯಿಂದ ಶನಿವಾರ ಮುಂಗಾರು ಪೂರ್ವ ಮೊದಲ ಮಳೆ ಬಿದ್ದಿದ್ದರಿಂದ ರಸ್ತೆಗಳಲ್ಲಿನ ಹಾಗೂ ಚರಂಡಿಗಳಲ್ಲಿನ ಮಳೆಗಾಲದಿಂದಲೂ ನಿಂತಿದ್ದ ಕೊಚ್ಚೆಹರಿದು ಕೆರೆ ಅಂಗಳ ಸೇರಿದೆ. ಈ ಎಲ್ಲಾ ಕಾರಣಗಳಿಂದ ಮೀನು ಮೃತಪಟ್ಟರಬಹುದು ಎಂದು ಪರಿಸರವಾದಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ನಾಗರಕೆರೆ ಯಲ್ಲಿನ ಮ್ಯಾನ್‌ ಹೋಲ್ ತೆರವು ಮಾಡಬೇಕು. ಕೆರೆಯ ಪುನಶ್ವೇತನಗೊಳಿಸಿ, ಮಲಿನ ನೀರು ಕೆರೆ ಸೇರದಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆ ಇಂದು ಶಾಸಕ ಧೀರಜ್ ಮುನಿರಾಜ್ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸ್ವಚ್ಛತಾ ಕಾರ್ಯ ಹಾಗೂ ಮೀನುಗಳ ಉಳಿವಿಗೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ನಗರಸಭಾ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago