ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಜನರ ಮಲ-ಮೂತ್ರ ಸೇರುವ ಕೊಳಚೆ ನೀರಿನ ಕೆರೆಯಾಗಿ ಮಾರ್ಪಟ್ಟಿದೆ. ಇದಲ್ಲದೆ ಕೆರೆಗೆ ನಿರಂತರವಾಗಿ ಘನ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬಯೋ ಮೆಡಿಕಲ್ ತ್ಯಾಜ್ಯ, ಕೋಳಿ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹೀಗೆ ಹಲವು ಬಗೆ-ಬಗೆಯ ತ್ಯಾಜ್ಯ ಸೇರಿ ಕಸದ ತೊಟ್ಟಿಯಂತಾಗಿದೆ.
ಜೊತೆಗೆ ಕೆರೆಯಲ್ಲಿ ಜಲ-ಕಳೆಯು ದಿನೇ ದಿನೇ ಹೆಚ್ಚುತಿದ್ದು, ಈಗಾಗಲೇ ಬಹುತೇಕ ಕೆರೆಯು ಜಲ-ಕಳೆಯಿಂದ ಕೂಡಿದೆ. ಕಳೆದ ಕೆಲವು ತಿಂಗಳ ಹಿಂದೆ ಕೆರೆಯಲ್ಲಿ ಮೀನುಗಳ ಮಾರಣ ಹೋಮವಾದಾಗ ತಾವುಗಳು ಭೇಟಿ ನೀಡಿ, ತಮ್ಮ ಸ್ವಂತ ಖರ್ಚಿನಲ್ಲಿ ಜಲ-ಕಳೆಯನ್ನು ಹೊರ ತೆಗೆದು ಕೆರೆಯನ್ನು ಸಂರಕ್ಷಿಸಿವುದಾಗಿ ಸಾರ್ವಜನಿಕವಾಗಿ ಮಾತು ನೀಡಿರುತ್ತೀರಿ, ಆದರೆ ಈವರೆಗೂ ಯಾವುದೇ ಕಾರ್ಯ ಆರಂಭವಾಗದೇ ಇರುವುದು ತಮ್ಮ ಕಾರ್ಯ ವೈಖರಿಯ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದೆ.
ಆದ್ದರಿಂದ, ಅತ್ಯಂತ ತ್ವರಿತವಾಗಿ ಕೆರೆಯಲ್ಲಿರುವ ಜಲಕಳೆಯನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ, ಕೆರೆಗೆ ಕಸವಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಭವಿಷ್ಯದಲ್ಲಿ ಕೆರೆಯ ಸತ್ತಲೂ ನಿಯಮಿತವಾಗಿ ಕಸವನ್ನು ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಎಂದು ಶಾಸಕ ಧೀರಜ್ ಮುನಿರಾಜ್ ಅವರಿಗೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…
ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…
ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…
2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…
ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…