ನಾಗರಕೆರೆಯ ಜಲ ಕಳೆ ಹಾಗೂ ಕಸವನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯ ಸ್ವಚ್ಛತೆಯನ್ನು ಕಾಪಾಡಲು ಮನವಿ

ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಜನರ ಮಲ-ಮೂತ್ರ ಸೇರುವ ಕೊಳಚೆ ನೀರಿನ ಕೆರೆಯಾಗಿ ಮಾರ್ಪಟ್ಟಿದೆ. ಇದಲ್ಲದೆ ಕೆರೆಗೆ ನಿರಂತರವಾಗಿ ಘನ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬಯೋ ಮೆಡಿಕಲ್ ತ್ಯಾಜ್ಯ, ಕೋಳಿ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹೀಗೆ ಹಲವು ಬಗೆ-ಬಗೆಯ ತ್ಯಾಜ್ಯ ಸೇರಿ ಕಸದ ತೊಟ್ಟಿಯಂತಾಗಿದೆ.

ಜೊತೆಗೆ ಕೆರೆಯಲ್ಲಿ ಜಲ-ಕಳೆಯು ದಿನೇ ದಿನೇ ಹೆಚ್ಚುತಿದ್ದು, ಈಗಾಗಲೇ ಬಹುತೇಕ ಕೆರೆಯು ಜಲ-ಕಳೆಯಿಂದ ಕೂಡಿದೆ. ಕಳೆದ ಕೆಲವು ತಿಂಗಳ ಹಿಂದೆ ಕೆರೆಯಲ್ಲಿ ಮೀನುಗಳ ಮಾರಣ ಹೋಮವಾದಾಗ ತಾವುಗಳು ಭೇಟಿ ನೀಡಿ, ತಮ್ಮ ಸ್ವಂತ ಖರ್ಚಿನಲ್ಲಿ ಜಲ-ಕಳೆಯನ್ನು ಹೊರ ತೆಗೆದು ಕೆರೆಯನ್ನು ಸಂರಕ್ಷಿಸಿವುದಾಗಿ ಸಾರ್ವಜನಿಕವಾಗಿ ಮಾತು ನೀಡಿರುತ್ತೀರಿ, ಆದರೆ ಈವರೆಗೂ ಯಾವುದೇ ಕಾರ್ಯ ಆರಂಭವಾಗದೇ ಇರುವುದು ತಮ್ಮ ಕಾರ್ಯ ವೈಖರಿಯ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದೆ.

ಆದ್ದರಿಂದ, ಅತ್ಯಂತ ತ್ವರಿತವಾಗಿ ಕೆರೆಯಲ್ಲಿರುವ ಜಲಕಳೆಯನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ, ಕೆರೆಗೆ ಕಸವಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಭವಿಷ್ಯದಲ್ಲಿ ಕೆರೆಯ ಸತ್ತಲೂ ನಿಯಮಿತವಾಗಿ ಕಸವನ್ನು ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಎಂದು ಶಾಸಕ ಧೀರಜ್ ಮುನಿರಾಜ್ ಅವರಿಗೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಯುಗಾದಿ, ರಂಜಾನ್ ಹಬ್ಬ ವಿಶೇಷ: ಜೂಜಾಟ ಸೇರಿದಂತೆ ಅಕ್ರಮ ಚಟುವಟಿಕೆ ತಡೆಗೆ ಪೊಲೀಸ್ ಇಲಾಖೆ ಕಸರತ್ತು: ಬೆಳ್ಳಂಬೆಳಗ್ಗೆ ರೌಡಿ ಪರೇಡ್: 70ಕ್ಕೂ ಹೆಚ್ಚು ರೌಡಿಗಳಿಗೆ ಬೆವರಿಳಿಸಿದ ಡಿವೈಎಸ್ ಪಿ ಪಾಂಡುರಂಗ

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಅಫ್ತಾ ವಸೂಲಿ…

29 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

9 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago