ನಾಗರಕೆರೆಯ ಜಲ ಕಳೆ ಹಾಗೂ ಕಸವನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯ ಸ್ವಚ್ಛತೆಯನ್ನು ಕಾಪಾಡಲು ಮನವಿ

ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಜನರ ಮಲ-ಮೂತ್ರ ಸೇರುವ ಕೊಳಚೆ ನೀರಿನ ಕೆರೆಯಾಗಿ ಮಾರ್ಪಟ್ಟಿದೆ. ಇದಲ್ಲದೆ ಕೆರೆಗೆ ನಿರಂತರವಾಗಿ ಘನ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬಯೋ ಮೆಡಿಕಲ್ ತ್ಯಾಜ್ಯ, ಕೋಳಿ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹೀಗೆ ಹಲವು ಬಗೆ-ಬಗೆಯ ತ್ಯಾಜ್ಯ ಸೇರಿ ಕಸದ ತೊಟ್ಟಿಯಂತಾಗಿದೆ.

ಜೊತೆಗೆ ಕೆರೆಯಲ್ಲಿ ಜಲ-ಕಳೆಯು ದಿನೇ ದಿನೇ ಹೆಚ್ಚುತಿದ್ದು, ಈಗಾಗಲೇ ಬಹುತೇಕ ಕೆರೆಯು ಜಲ-ಕಳೆಯಿಂದ ಕೂಡಿದೆ. ಕಳೆದ ಕೆಲವು ತಿಂಗಳ ಹಿಂದೆ ಕೆರೆಯಲ್ಲಿ ಮೀನುಗಳ ಮಾರಣ ಹೋಮವಾದಾಗ ತಾವುಗಳು ಭೇಟಿ ನೀಡಿ, ತಮ್ಮ ಸ್ವಂತ ಖರ್ಚಿನಲ್ಲಿ ಜಲ-ಕಳೆಯನ್ನು ಹೊರ ತೆಗೆದು ಕೆರೆಯನ್ನು ಸಂರಕ್ಷಿಸಿವುದಾಗಿ ಸಾರ್ವಜನಿಕವಾಗಿ ಮಾತು ನೀಡಿರುತ್ತೀರಿ, ಆದರೆ ಈವರೆಗೂ ಯಾವುದೇ ಕಾರ್ಯ ಆರಂಭವಾಗದೇ ಇರುವುದು ತಮ್ಮ ಕಾರ್ಯ ವೈಖರಿಯ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದೆ.

ಆದ್ದರಿಂದ, ಅತ್ಯಂತ ತ್ವರಿತವಾಗಿ ಕೆರೆಯಲ್ಲಿರುವ ಜಲಕಳೆಯನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ, ಕೆರೆಗೆ ಕಸವಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಭವಿಷ್ಯದಲ್ಲಿ ಕೆರೆಯ ಸತ್ತಲೂ ನಿಯಮಿತವಾಗಿ ಕಸವನ್ನು ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಎಂದು ಶಾಸಕ ಧೀರಜ್ ಮುನಿರಾಜ್ ಅವರಿಗೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

9 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

10 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

15 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

16 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

21 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

22 hours ago