ನಾಗರಕೆರೆಯ ಜಲ ಕಳೆ ಹಾಗೂ ಕಸವನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯ ಸ್ವಚ್ಛತೆಯನ್ನು ಕಾಪಾಡಲು ಮನವಿ

ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಜನರ ಮಲ-ಮೂತ್ರ ಸೇರುವ ಕೊಳಚೆ ನೀರಿನ ಕೆರೆಯಾಗಿ ಮಾರ್ಪಟ್ಟಿದೆ. ಇದಲ್ಲದೆ ಕೆರೆಗೆ ನಿರಂತರವಾಗಿ ಘನ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬಯೋ ಮೆಡಿಕಲ್ ತ್ಯಾಜ್ಯ, ಕೋಳಿ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹೀಗೆ ಹಲವು ಬಗೆ-ಬಗೆಯ ತ್ಯಾಜ್ಯ ಸೇರಿ ಕಸದ ತೊಟ್ಟಿಯಂತಾಗಿದೆ.

ಜೊತೆಗೆ ಕೆರೆಯಲ್ಲಿ ಜಲ-ಕಳೆಯು ದಿನೇ ದಿನೇ ಹೆಚ್ಚುತಿದ್ದು, ಈಗಾಗಲೇ ಬಹುತೇಕ ಕೆರೆಯು ಜಲ-ಕಳೆಯಿಂದ ಕೂಡಿದೆ. ಕಳೆದ ಕೆಲವು ತಿಂಗಳ ಹಿಂದೆ ಕೆರೆಯಲ್ಲಿ ಮೀನುಗಳ ಮಾರಣ ಹೋಮವಾದಾಗ ತಾವುಗಳು ಭೇಟಿ ನೀಡಿ, ತಮ್ಮ ಸ್ವಂತ ಖರ್ಚಿನಲ್ಲಿ ಜಲ-ಕಳೆಯನ್ನು ಹೊರ ತೆಗೆದು ಕೆರೆಯನ್ನು ಸಂರಕ್ಷಿಸಿವುದಾಗಿ ಸಾರ್ವಜನಿಕವಾಗಿ ಮಾತು ನೀಡಿರುತ್ತೀರಿ, ಆದರೆ ಈವರೆಗೂ ಯಾವುದೇ ಕಾರ್ಯ ಆರಂಭವಾಗದೇ ಇರುವುದು ತಮ್ಮ ಕಾರ್ಯ ವೈಖರಿಯ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದೆ.

ಆದ್ದರಿಂದ, ಅತ್ಯಂತ ತ್ವರಿತವಾಗಿ ಕೆರೆಯಲ್ಲಿರುವ ಜಲಕಳೆಯನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ, ಕೆರೆಗೆ ಕಸವಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಭವಿಷ್ಯದಲ್ಲಿ ಕೆರೆಯ ಸತ್ತಲೂ ನಿಯಮಿತವಾಗಿ ಕಸವನ್ನು ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಎಂದು ಶಾಸಕ ಧೀರಜ್ ಮುನಿರಾಜ್ ಅವರಿಗೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

16 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

19 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

19 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago