ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಜನರ ಮಲ-ಮೂತ್ರ ಸೇರುವ ಕೊಳಚೆ ನೀರಿನ ಕೆರೆಯಾಗಿ ಮಾರ್ಪಟ್ಟಿದೆ. ಇದಲ್ಲದೆ ಕೆರೆಗೆ ನಿರಂತರವಾಗಿ ಘನ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬಯೋ ಮೆಡಿಕಲ್ ತ್ಯಾಜ್ಯ, ಕೋಳಿ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹೀಗೆ ಹಲವು ಬಗೆ-ಬಗೆಯ ತ್ಯಾಜ್ಯ ಸೇರಿ ಕಸದ ತೊಟ್ಟಿಯಂತಾಗಿದೆ.
ಜೊತೆಗೆ ಕೆರೆಯಲ್ಲಿ ಜಲ-ಕಳೆಯು ದಿನೇ ದಿನೇ ಹೆಚ್ಚುತಿದ್ದು, ಈಗಾಗಲೇ ಬಹುತೇಕ ಕೆರೆಯು ಜಲ-ಕಳೆಯಿಂದ ಕೂಡಿದೆ. ಕಳೆದ ಕೆಲವು ತಿಂಗಳ ಹಿಂದೆ ಕೆರೆಯಲ್ಲಿ ಮೀನುಗಳ ಮಾರಣ ಹೋಮವಾದಾಗ ತಾವುಗಳು ಭೇಟಿ ನೀಡಿ, ತಮ್ಮ ಸ್ವಂತ ಖರ್ಚಿನಲ್ಲಿ ಜಲ-ಕಳೆಯನ್ನು ಹೊರ ತೆಗೆದು ಕೆರೆಯನ್ನು ಸಂರಕ್ಷಿಸಿವುದಾಗಿ ಸಾರ್ವಜನಿಕವಾಗಿ ಮಾತು ನೀಡಿರುತ್ತೀರಿ, ಆದರೆ ಈವರೆಗೂ ಯಾವುದೇ ಕಾರ್ಯ ಆರಂಭವಾಗದೇ ಇರುವುದು ತಮ್ಮ ಕಾರ್ಯ ವೈಖರಿಯ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದೆ.
ಆದ್ದರಿಂದ, ಅತ್ಯಂತ ತ್ವರಿತವಾಗಿ ಕೆರೆಯಲ್ಲಿರುವ ಜಲಕಳೆಯನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ, ಕೆರೆಗೆ ಕಸವಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಭವಿಷ್ಯದಲ್ಲಿ ಕೆರೆಯ ಸತ್ತಲೂ ನಿಯಮಿತವಾಗಿ ಕಸವನ್ನು ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಎಂದು ಶಾಸಕ ಧೀರಜ್ ಮುನಿರಾಜ್ ಅವರಿಗೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…