ನಾಗರಕೆರೆಯ ಜಲ ಕಳೆ ಹಾಗೂ ಕಸವನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯ ಸ್ವಚ್ಛತೆಯನ್ನು ಕಾಪಾಡಲು ಮನವಿ

ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಜನರ ಮಲ-ಮೂತ್ರ ಸೇರುವ ಕೊಳಚೆ ನೀರಿನ ಕೆರೆಯಾಗಿ ಮಾರ್ಪಟ್ಟಿದೆ. ಇದಲ್ಲದೆ ಕೆರೆಗೆ ನಿರಂತರವಾಗಿ ಘನ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬಯೋ ಮೆಡಿಕಲ್ ತ್ಯಾಜ್ಯ, ಕೋಳಿ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹೀಗೆ ಹಲವು ಬಗೆ-ಬಗೆಯ ತ್ಯಾಜ್ಯ ಸೇರಿ ಕಸದ ತೊಟ್ಟಿಯಂತಾಗಿದೆ.

ಜೊತೆಗೆ ಕೆರೆಯಲ್ಲಿ ಜಲ-ಕಳೆಯು ದಿನೇ ದಿನೇ ಹೆಚ್ಚುತಿದ್ದು, ಈಗಾಗಲೇ ಬಹುತೇಕ ಕೆರೆಯು ಜಲ-ಕಳೆಯಿಂದ ಕೂಡಿದೆ. ಕಳೆದ ಕೆಲವು ತಿಂಗಳ ಹಿಂದೆ ಕೆರೆಯಲ್ಲಿ ಮೀನುಗಳ ಮಾರಣ ಹೋಮವಾದಾಗ ತಾವುಗಳು ಭೇಟಿ ನೀಡಿ, ತಮ್ಮ ಸ್ವಂತ ಖರ್ಚಿನಲ್ಲಿ ಜಲ-ಕಳೆಯನ್ನು ಹೊರ ತೆಗೆದು ಕೆರೆಯನ್ನು ಸಂರಕ್ಷಿಸಿವುದಾಗಿ ಸಾರ್ವಜನಿಕವಾಗಿ ಮಾತು ನೀಡಿರುತ್ತೀರಿ, ಆದರೆ ಈವರೆಗೂ ಯಾವುದೇ ಕಾರ್ಯ ಆರಂಭವಾಗದೇ ಇರುವುದು ತಮ್ಮ ಕಾರ್ಯ ವೈಖರಿಯ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದೆ.

ಆದ್ದರಿಂದ, ಅತ್ಯಂತ ತ್ವರಿತವಾಗಿ ಕೆರೆಯಲ್ಲಿರುವ ಜಲಕಳೆಯನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ, ಕೆರೆಗೆ ಕಸವಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಭವಿಷ್ಯದಲ್ಲಿ ಕೆರೆಯ ಸತ್ತಲೂ ನಿಯಮಿತವಾಗಿ ಕಸವನ್ನು ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಎಂದು ಶಾಸಕ ಧೀರಜ್ ಮುನಿರಾಜ್ ಅವರಿಗೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago