ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಜನರ ಮಲ-ಮೂತ್ರ ಸೇರುವ ಕೊಳಚೆ ನೀರಿನ ಕೆರೆಯಾಗಿ ಮಾರ್ಪಟ್ಟಿದೆ. ಇದಲ್ಲದೆ ಕೆರೆಗೆ ನಿರಂತರವಾಗಿ ಘನ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬಯೋ ಮೆಡಿಕಲ್ ತ್ಯಾಜ್ಯ, ಕೋಳಿ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹೀಗೆ ಹಲವು ಬಗೆ-ಬಗೆಯ ತ್ಯಾಜ್ಯ ಸೇರಿ ಕಸದ ತೊಟ್ಟಿಯಂತಾಗಿದೆ.
ಜೊತೆಗೆ ಕೆರೆಯಲ್ಲಿ ಜಲ-ಕಳೆಯು ದಿನೇ ದಿನೇ ಹೆಚ್ಚುತಿದ್ದು, ಈಗಾಗಲೇ ಬಹುತೇಕ ಕೆರೆಯು ಜಲ-ಕಳೆಯಿಂದ ಕೂಡಿದೆ. ಕಳೆದ ಕೆಲವು ತಿಂಗಳ ಹಿಂದೆ ಕೆರೆಯಲ್ಲಿ ಮೀನುಗಳ ಮಾರಣ ಹೋಮವಾದಾಗ ತಾವುಗಳು ಭೇಟಿ ನೀಡಿ, ತಮ್ಮ ಸ್ವಂತ ಖರ್ಚಿನಲ್ಲಿ ಜಲ-ಕಳೆಯನ್ನು ಹೊರ ತೆಗೆದು ಕೆರೆಯನ್ನು ಸಂರಕ್ಷಿಸಿವುದಾಗಿ ಸಾರ್ವಜನಿಕವಾಗಿ ಮಾತು ನೀಡಿರುತ್ತೀರಿ, ಆದರೆ ಈವರೆಗೂ ಯಾವುದೇ ಕಾರ್ಯ ಆರಂಭವಾಗದೇ ಇರುವುದು ತಮ್ಮ ಕಾರ್ಯ ವೈಖರಿಯ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದೆ.
ಆದ್ದರಿಂದ, ಅತ್ಯಂತ ತ್ವರಿತವಾಗಿ ಕೆರೆಯಲ್ಲಿರುವ ಜಲಕಳೆಯನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ, ಕೆರೆಗೆ ಕಸವಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಭವಿಷ್ಯದಲ್ಲಿ ಕೆರೆಯ ಸತ್ತಲೂ ನಿಯಮಿತವಾಗಿ ಕಸವನ್ನು ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಎಂದು ಶಾಸಕ ಧೀರಜ್ ಮುನಿರಾಜ್ ಅವರಿಗೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…