ನಾಗರಕೆರೆಯ ಜಲ ಕಳೆ ಹಾಗೂ ಕಸವನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯ ಸ್ವಚ್ಛತೆಯನ್ನು ಕಾಪಾಡಲು ಮನವಿ

ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಜನರ ಮಲ-ಮೂತ್ರ ಸೇರುವ ಕೊಳಚೆ ನೀರಿನ ಕೆರೆಯಾಗಿ ಮಾರ್ಪಟ್ಟಿದೆ. ಇದಲ್ಲದೆ ಕೆರೆಗೆ ನಿರಂತರವಾಗಿ ಘನ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬಯೋ ಮೆಡಿಕಲ್ ತ್ಯಾಜ್ಯ, ಕೋಳಿ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹೀಗೆ ಹಲವು ಬಗೆ-ಬಗೆಯ ತ್ಯಾಜ್ಯ ಸೇರಿ ಕಸದ ತೊಟ್ಟಿಯಂತಾಗಿದೆ.

ಜೊತೆಗೆ ಕೆರೆಯಲ್ಲಿ ಜಲ-ಕಳೆಯು ದಿನೇ ದಿನೇ ಹೆಚ್ಚುತಿದ್ದು, ಈಗಾಗಲೇ ಬಹುತೇಕ ಕೆರೆಯು ಜಲ-ಕಳೆಯಿಂದ ಕೂಡಿದೆ. ಕಳೆದ ಕೆಲವು ತಿಂಗಳ ಹಿಂದೆ ಕೆರೆಯಲ್ಲಿ ಮೀನುಗಳ ಮಾರಣ ಹೋಮವಾದಾಗ ತಾವುಗಳು ಭೇಟಿ ನೀಡಿ, ತಮ್ಮ ಸ್ವಂತ ಖರ್ಚಿನಲ್ಲಿ ಜಲ-ಕಳೆಯನ್ನು ಹೊರ ತೆಗೆದು ಕೆರೆಯನ್ನು ಸಂರಕ್ಷಿಸಿವುದಾಗಿ ಸಾರ್ವಜನಿಕವಾಗಿ ಮಾತು ನೀಡಿರುತ್ತೀರಿ, ಆದರೆ ಈವರೆಗೂ ಯಾವುದೇ ಕಾರ್ಯ ಆರಂಭವಾಗದೇ ಇರುವುದು ತಮ್ಮ ಕಾರ್ಯ ವೈಖರಿಯ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದೆ.

ಆದ್ದರಿಂದ, ಅತ್ಯಂತ ತ್ವರಿತವಾಗಿ ಕೆರೆಯಲ್ಲಿರುವ ಜಲಕಳೆಯನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ, ಕೆರೆಗೆ ಕಸವಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಭವಿಷ್ಯದಲ್ಲಿ ಕೆರೆಯ ಸತ್ತಲೂ ನಿಯಮಿತವಾಗಿ ಕಸವನ್ನು ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಎಂದು ಶಾಸಕ ಧೀರಜ್ ಮುನಿರಾಜ್ ಅವರಿಗೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

10 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

13 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago