ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಜನರ ಮಲ-ಮೂತ್ರ ಸೇರುವ ಕೊಳಚೆ ನೀರಿನ ಕೆರೆಯಾಗಿ ಮಾರ್ಪಟ್ಟಿದೆ. ಇದಲ್ಲದೆ ಕೆರೆಗೆ ನಿರಂತರವಾಗಿ ಘನ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬಯೋ ಮೆಡಿಕಲ್ ತ್ಯಾಜ್ಯ, ಕೋಳಿ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹೀಗೆ ಹಲವು ಬಗೆ-ಬಗೆಯ ತ್ಯಾಜ್ಯ ಸೇರಿ ಕಸದ ತೊಟ್ಟಿಯಂತಾಗಿದೆ.
ಜೊತೆಗೆ ಕೆರೆಯಲ್ಲಿ ಜಲ-ಕಳೆಯು ದಿನೇ ದಿನೇ ಹೆಚ್ಚುತಿದ್ದು, ಈಗಾಗಲೇ ಬಹುತೇಕ ಕೆರೆಯು ಜಲ-ಕಳೆಯಿಂದ ಕೂಡಿದೆ. ಕಳೆದ ಕೆಲವು ತಿಂಗಳ ಹಿಂದೆ ಕೆರೆಯಲ್ಲಿ ಮೀನುಗಳ ಮಾರಣ ಹೋಮವಾದಾಗ ತಾವುಗಳು ಭೇಟಿ ನೀಡಿ, ತಮ್ಮ ಸ್ವಂತ ಖರ್ಚಿನಲ್ಲಿ ಜಲ-ಕಳೆಯನ್ನು ಹೊರ ತೆಗೆದು ಕೆರೆಯನ್ನು ಸಂರಕ್ಷಿಸಿವುದಾಗಿ ಸಾರ್ವಜನಿಕವಾಗಿ ಮಾತು ನೀಡಿರುತ್ತೀರಿ, ಆದರೆ ಈವರೆಗೂ ಯಾವುದೇ ಕಾರ್ಯ ಆರಂಭವಾಗದೇ ಇರುವುದು ತಮ್ಮ ಕಾರ್ಯ ವೈಖರಿಯ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದೆ.
ಆದ್ದರಿಂದ, ಅತ್ಯಂತ ತ್ವರಿತವಾಗಿ ಕೆರೆಯಲ್ಲಿರುವ ಜಲಕಳೆಯನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ, ಕೆರೆಗೆ ಕಸವಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಭವಿಷ್ಯದಲ್ಲಿ ಕೆರೆಯ ಸತ್ತಲೂ ನಿಯಮಿತವಾಗಿ ಕಸವನ್ನು ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಎಂದು ಶಾಸಕ ಧೀರಜ್ ಮುನಿರಾಜ್ ಅವರಿಗೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…