ದೊಡ್ಡಬಳ್ಳಾಪುರದ ಐತಿಹಾಸಿಕ ನಾಗರಕೆರೆಯು ನೂರಾರು ದಶಕಗಳ ಕಾಲ ಸಾವಿರಾರು ಜನರಿಗೆ ಕುಡಿಯುವ ನೀರನ್ನು ಒದಗಿಸಿತ್ತು. ಆದರೆ, ಕೆಲ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಜನರ ಮಲ-ಮೂತ್ರ ಸೇರುವ ಕೊಳಚೆ ನೀರಿನ ಕೆರೆಯಾಗಿ ಮಾರ್ಪಟ್ಟಿದೆ. ಇದಲ್ಲದೆ ಕೆರೆಗೆ ನಿರಂತರವಾಗಿ ಘನ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಬಯೋ ಮೆಡಿಕಲ್ ತ್ಯಾಜ್ಯ, ಕೋಳಿ ತ್ಯಾಜ್ಯ, ಕಟ್ಟಡ ತ್ಯಾಜ್ಯ ಹೀಗೆ ಹಲವು ಬಗೆ-ಬಗೆಯ ತ್ಯಾಜ್ಯ ಸೇರಿ ಕಸದ ತೊಟ್ಟಿಯಂತಾಗಿದೆ.
ಜೊತೆಗೆ ಕೆರೆಯಲ್ಲಿ ಜಲ-ಕಳೆಯು ದಿನೇ ದಿನೇ ಹೆಚ್ಚುತಿದ್ದು, ಈಗಾಗಲೇ ಬಹುತೇಕ ಕೆರೆಯು ಜಲ-ಕಳೆಯಿಂದ ಕೂಡಿದೆ. ಕಳೆದ ಕೆಲವು ತಿಂಗಳ ಹಿಂದೆ ಕೆರೆಯಲ್ಲಿ ಮೀನುಗಳ ಮಾರಣ ಹೋಮವಾದಾಗ ತಾವುಗಳು ಭೇಟಿ ನೀಡಿ, ತಮ್ಮ ಸ್ವಂತ ಖರ್ಚಿನಲ್ಲಿ ಜಲ-ಕಳೆಯನ್ನು ಹೊರ ತೆಗೆದು ಕೆರೆಯನ್ನು ಸಂರಕ್ಷಿಸಿವುದಾಗಿ ಸಾರ್ವಜನಿಕವಾಗಿ ಮಾತು ನೀಡಿರುತ್ತೀರಿ, ಆದರೆ ಈವರೆಗೂ ಯಾವುದೇ ಕಾರ್ಯ ಆರಂಭವಾಗದೇ ಇರುವುದು ತಮ್ಮ ಕಾರ್ಯ ವೈಖರಿಯ ಬಗ್ಗೆ ಅನೇಕ ಅನುಮಾನಗಳು ಮೂಡುವಂತೆ ಮಾಡಿದೆ.
ಆದ್ದರಿಂದ, ಅತ್ಯಂತ ತ್ವರಿತವಾಗಿ ಕೆರೆಯಲ್ಲಿರುವ ಜಲಕಳೆಯನ್ನು ವೈಜ್ಞಾನಿಕವಾಗಿ ತೆರವುಗೊಳಿಸಿ, ಕೆರೆಯಲ್ಲಿ ಬಿದ್ದಿರುವ ಕಸವನ್ನು ತೆರವುಗೊಳಿಸಿ, ಕೆರೆಗೆ ಕಸವಾಕುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಭವಿಷ್ಯದಲ್ಲಿ ಕೆರೆಯ ಸತ್ತಲೂ ನಿಯಮಿತವಾಗಿ ಕಸವನ್ನು ಸಂಗ್ರಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ಎಂದು ಶಾಸಕ ಧೀರಜ್ ಮುನಿರಾಜ್ ಅವರಿಗೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…