ನಾಗರಕೆರೆ ಏರಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಕಳ್ಳತನ

ನಗರದ ನಾಗರಕೆರೆ ಏರಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಹಾಗೂ ಪೂಜಾ ಸಾಮಗ್ರಿಗಳು ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ದೇವಾಲಯದ ಮುಂಭಾಗದ ಚಿಲಕವನ್ನು ಕೊಯ್ದು, ಒಳ ನುಗ್ಗಿರುವ ಕಳ್ಳರು ದೇವಾಲಯದಲ್ಲಿನ ಎರಡು ಸಣ್ಣ ಹುಂಡಿಗಳನ್ನು ಹೊಡೆದು ಹುಂಡಿಯಲ್ಲಿದ ಹಣ ದೋಚಿದ್ದಾರೆ. ಇದರೊಂದಿಗೆ ದೇವಾಲಯದ ಗರ್ಭಗುಡಿಯಲ್ಲಿದ್ದ ಸಾವಿರಾರು ರೂ. ಮೌಲ್ಯದ ತೂಗುದೀಪ, ಮಂಗಳಾರತಿ ತಟ್ಟೆ, ಸಣ್ಣ ಕಿರೀಟವನ್ನು ಕಳ್ಳತನ ಮಾಡಿದ್ದಾರೆ. ಹುಂಡಿಯಲ್ಲಿ ಅಷ್ಟೇನೂ ಹಣ ಇರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಹಿತ್ತಾಳಿಯ ಪೂಜಾ ಸಾಮಗ್ರಿಗಳು ಸುಮಾರು 10 ಸಾವಿರ ರೂ ಬೆಲೆ ಬಾಳಲಿವೆ ಎಂದು ದೇವಾಲಯದ ಸಮಿತಿಯವರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಾಲಯದ ಬಳಿ ರಾತ್ರಿ ಸಂಚಾರ ಇರುವುದಿಲ್ಲ. ನಾಗರಕೆರೆ ಏರಿ ಮೇಲೆ ಬೆಳಿಗ್ಗೆ ಮತ್ತು ಸಂಜೆ ವಾಯು ಸಂಚಾರ ಮಾಡುವವರಿಗೆ ರಕ್ಷಣೆ ಒದಗಿಸಲು ಪೊಲೀಸ್ ಬೀಟ್ ಹಾಕಲಾಗಿದೆ. ಆದರೂ, ಮಧ್ಯರಾತ್ರಿ ಈ ಘಟನೆ ನಡೆದಿದ್ದು, ರಾತ್ರಿ ವೇಳೆಯೂ ಪೊಲೀಸ್ ಬೀಟ್ ಹಾಕಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

5 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

6 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

7 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

9 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

10 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

21 hours ago