ನಗರದ ನಾಗರಕೆರೆ ಏರಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಹಾಗೂ ಪೂಜಾ ಸಾಮಗ್ರಿಗಳು ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ದೇವಾಲಯದ ಮುಂಭಾಗದ ಚಿಲಕವನ್ನು ಕೊಯ್ದು, ಒಳ ನುಗ್ಗಿರುವ ಕಳ್ಳರು ದೇವಾಲಯದಲ್ಲಿನ ಎರಡು ಸಣ್ಣ ಹುಂಡಿಗಳನ್ನು ಹೊಡೆದು ಹುಂಡಿಯಲ್ಲಿದ ಹಣ ದೋಚಿದ್ದಾರೆ. ಇದರೊಂದಿಗೆ ದೇವಾಲಯದ ಗರ್ಭಗುಡಿಯಲ್ಲಿದ್ದ ಸಾವಿರಾರು ರೂ. ಮೌಲ್ಯದ ತೂಗುದೀಪ, ಮಂಗಳಾರತಿ ತಟ್ಟೆ, ಸಣ್ಣ ಕಿರೀಟವನ್ನು ಕಳ್ಳತನ ಮಾಡಿದ್ದಾರೆ. ಹುಂಡಿಯಲ್ಲಿ ಅಷ್ಟೇನೂ ಹಣ ಇರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಹಿತ್ತಾಳಿಯ ಪೂಜಾ ಸಾಮಗ್ರಿಗಳು ಸುಮಾರು 10 ಸಾವಿರ ರೂ ಬೆಲೆ ಬಾಳಲಿವೆ ಎಂದು ದೇವಾಲಯದ ಸಮಿತಿಯವರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಾಲಯದ ಬಳಿ ರಾತ್ರಿ ಸಂಚಾರ ಇರುವುದಿಲ್ಲ. ನಾಗರಕೆರೆ ಏರಿ ಮೇಲೆ ಬೆಳಿಗ್ಗೆ ಮತ್ತು ಸಂಜೆ ವಾಯು ಸಂಚಾರ ಮಾಡುವವರಿಗೆ ರಕ್ಷಣೆ ಒದಗಿಸಲು ಪೊಲೀಸ್ ಬೀಟ್ ಹಾಕಲಾಗಿದೆ. ಆದರೂ, ಮಧ್ಯರಾತ್ರಿ ಈ ಘಟನೆ ನಡೆದಿದ್ದು, ರಾತ್ರಿ ವೇಳೆಯೂ ಪೊಲೀಸ್ ಬೀಟ್ ಹಾಕಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…