ನಗರದ ನಾಗರಕೆರೆ ಏರಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಹಾಗೂ ಪೂಜಾ ಸಾಮಗ್ರಿಗಳು ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ದೇವಾಲಯದ ಮುಂಭಾಗದ ಚಿಲಕವನ್ನು ಕೊಯ್ದು, ಒಳ ನುಗ್ಗಿರುವ ಕಳ್ಳರು ದೇವಾಲಯದಲ್ಲಿನ ಎರಡು ಸಣ್ಣ ಹುಂಡಿಗಳನ್ನು ಹೊಡೆದು ಹುಂಡಿಯಲ್ಲಿದ ಹಣ ದೋಚಿದ್ದಾರೆ. ಇದರೊಂದಿಗೆ ದೇವಾಲಯದ ಗರ್ಭಗುಡಿಯಲ್ಲಿದ್ದ ಸಾವಿರಾರು ರೂ. ಮೌಲ್ಯದ ತೂಗುದೀಪ, ಮಂಗಳಾರತಿ ತಟ್ಟೆ, ಸಣ್ಣ ಕಿರೀಟವನ್ನು ಕಳ್ಳತನ ಮಾಡಿದ್ದಾರೆ. ಹುಂಡಿಯಲ್ಲಿ ಅಷ್ಟೇನೂ ಹಣ ಇರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಹಿತ್ತಾಳಿಯ ಪೂಜಾ ಸಾಮಗ್ರಿಗಳು ಸುಮಾರು 10 ಸಾವಿರ ರೂ ಬೆಲೆ ಬಾಳಲಿವೆ ಎಂದು ದೇವಾಲಯದ ಸಮಿತಿಯವರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಾಲಯದ ಬಳಿ ರಾತ್ರಿ ಸಂಚಾರ ಇರುವುದಿಲ್ಲ. ನಾಗರಕೆರೆ ಏರಿ ಮೇಲೆ ಬೆಳಿಗ್ಗೆ ಮತ್ತು ಸಂಜೆ ವಾಯು ಸಂಚಾರ ಮಾಡುವವರಿಗೆ ರಕ್ಷಣೆ ಒದಗಿಸಲು ಪೊಲೀಸ್ ಬೀಟ್ ಹಾಕಲಾಗಿದೆ. ಆದರೂ, ಮಧ್ಯರಾತ್ರಿ ಈ ಘಟನೆ ನಡೆದಿದ್ದು, ರಾತ್ರಿ ವೇಳೆಯೂ ಪೊಲೀಸ್ ಬೀಟ್ ಹಾಕಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…