ನಗರದ ನಾಗರಕೆರೆ ಏರಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಹಾಗೂ ಪೂಜಾ ಸಾಮಗ್ರಿಗಳು ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ದೇವಾಲಯದ ಮುಂಭಾಗದ ಚಿಲಕವನ್ನು ಕೊಯ್ದು, ಒಳ ನುಗ್ಗಿರುವ ಕಳ್ಳರು ದೇವಾಲಯದಲ್ಲಿನ ಎರಡು ಸಣ್ಣ ಹುಂಡಿಗಳನ್ನು ಹೊಡೆದು ಹುಂಡಿಯಲ್ಲಿದ ಹಣ ದೋಚಿದ್ದಾರೆ. ಇದರೊಂದಿಗೆ ದೇವಾಲಯದ ಗರ್ಭಗುಡಿಯಲ್ಲಿದ್ದ ಸಾವಿರಾರು ರೂ. ಮೌಲ್ಯದ ತೂಗುದೀಪ, ಮಂಗಳಾರತಿ ತಟ್ಟೆ, ಸಣ್ಣ ಕಿರೀಟವನ್ನು ಕಳ್ಳತನ ಮಾಡಿದ್ದಾರೆ. ಹುಂಡಿಯಲ್ಲಿ ಅಷ್ಟೇನೂ ಹಣ ಇರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಹಿತ್ತಾಳಿಯ ಪೂಜಾ ಸಾಮಗ್ರಿಗಳು ಸುಮಾರು 10 ಸಾವಿರ ರೂ ಬೆಲೆ ಬಾಳಲಿವೆ ಎಂದು ದೇವಾಲಯದ ಸಮಿತಿಯವರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಾಲಯದ ಬಳಿ ರಾತ್ರಿ ಸಂಚಾರ ಇರುವುದಿಲ್ಲ. ನಾಗರಕೆರೆ ಏರಿ ಮೇಲೆ ಬೆಳಿಗ್ಗೆ ಮತ್ತು ಸಂಜೆ ವಾಯು ಸಂಚಾರ ಮಾಡುವವರಿಗೆ ರಕ್ಷಣೆ ಒದಗಿಸಲು ಪೊಲೀಸ್ ಬೀಟ್ ಹಾಕಲಾಗಿದೆ. ಆದರೂ, ಮಧ್ಯರಾತ್ರಿ ಈ ಘಟನೆ ನಡೆದಿದ್ದು, ರಾತ್ರಿ ವೇಳೆಯೂ ಪೊಲೀಸ್ ಬೀಟ್ ಹಾಕಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…