ನಗರದ ನಾಗರಕೆರೆ ಏರಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಹಾಗೂ ಪೂಜಾ ಸಾಮಗ್ರಿಗಳು ಕಳ್ಳತನವಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ದೇವಾಲಯದ ಮುಂಭಾಗದ ಚಿಲಕವನ್ನು ಕೊಯ್ದು, ಒಳ ನುಗ್ಗಿರುವ ಕಳ್ಳರು ದೇವಾಲಯದಲ್ಲಿನ ಎರಡು ಸಣ್ಣ ಹುಂಡಿಗಳನ್ನು ಹೊಡೆದು ಹುಂಡಿಯಲ್ಲಿದ ಹಣ ದೋಚಿದ್ದಾರೆ. ಇದರೊಂದಿಗೆ ದೇವಾಲಯದ ಗರ್ಭಗುಡಿಯಲ್ಲಿದ್ದ ಸಾವಿರಾರು ರೂ. ಮೌಲ್ಯದ ತೂಗುದೀಪ, ಮಂಗಳಾರತಿ ತಟ್ಟೆ, ಸಣ್ಣ ಕಿರೀಟವನ್ನು ಕಳ್ಳತನ ಮಾಡಿದ್ದಾರೆ. ಹುಂಡಿಯಲ್ಲಿ ಅಷ್ಟೇನೂ ಹಣ ಇರಲಿಲ್ಲ ಎಂದು ತಿಳಿದು ಬಂದಿದೆ. ಆದರೆ ಹಿತ್ತಾಳಿಯ ಪೂಜಾ ಸಾಮಗ್ರಿಗಳು ಸುಮಾರು 10 ಸಾವಿರ ರೂ ಬೆಲೆ ಬಾಳಲಿವೆ ಎಂದು ದೇವಾಲಯದ ಸಮಿತಿಯವರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದೇವಾಲಯದ ಬಳಿ ರಾತ್ರಿ ಸಂಚಾರ ಇರುವುದಿಲ್ಲ. ನಾಗರಕೆರೆ ಏರಿ ಮೇಲೆ ಬೆಳಿಗ್ಗೆ ಮತ್ತು ಸಂಜೆ ವಾಯು ಸಂಚಾರ ಮಾಡುವವರಿಗೆ ರಕ್ಷಣೆ ಒದಗಿಸಲು ಪೊಲೀಸ್ ಬೀಟ್ ಹಾಕಲಾಗಿದೆ. ಆದರೂ, ಮಧ್ಯರಾತ್ರಿ ಈ ಘಟನೆ ನಡೆದಿದ್ದು, ರಾತ್ರಿ ವೇಳೆಯೂ ಪೊಲೀಸ್ ಬೀಟ್ ಹಾಕಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…