ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಉದ್ಯಾನದಂಚಿನ ಹನಗೋಡು ಹೋಬಳಿಯ ಭರತವಾಡಿ ಹಾಡಿಯ ರುದ್ರ ಬಂಧಿತ ಆರೋಪಿ, ಈತನಿಂದ ಎರಡು ಕೆ.ಜಿಯಷ್ಟು ಜಿಂಕೆ ಮಾಂಸ, ಕೃತ್ಯಕ್ಕೆ ಬಳಸಿದ್ದ ಬೈಕ್, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಕಪ್ಪನಕಟ್ಟೆ ಹಾಡಿಯ ರಾಮು ಹಾಗೂ ಅವ್ವು ತಲೆ ಮರೆಸಿಕೊಂಡಿದ್ದಾರೆ.
ಆರೋಪಿಗಳು ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಿಭಾಗದ ಆರ್.ಎಫ್.ಓ.ಸುಬ್ರಮಣ್ಯ ಕೆ.ಇ, ಆನೆಚೌಕೂರು ವಲಯದ ಡಿಆರ್ಎಫ್ಓ ಶಿವಕುಮಾರ್ ಹಾಗೂ ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿ ಹನಗೋಡಿಗೆ ಸಮೀಪದ ಕಿರಂಗೂರು ಗೇಟ್ ಬಳಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು, ಉಳಿದಿಬ್ಬರು ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಪಿ.ಎ.ಸೀಮಾ ತಿಳಿಸಿದ್ದಾರೆ.
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ…
ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…
ಕೇಂದ್ರ ಟಿಬಿ ಡಿವಿಷನ್, ದೆಹಲಿಯಿಂದ ನಿಕ್ಷಯ ಮಿತ್ರ ಕಾರ್ಯಕ್ರಮದ ಪ್ರಗತಿ ವೀಕ್ಷಣೆಗಾಗಿ ತಾಂತ್ರಿಕ ಸಹಾಯ ತಂಡವು ದೊಡ್ಡಬಳ್ಳಾಪುರಕ್ಕೆ ಆಗಮಿಸಿ, ನಿಕ್ಷಯ…