ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಉದ್ಯಾನದಂಚಿನ ಹನಗೋಡು ಹೋಬಳಿಯ ಭರತವಾಡಿ ಹಾಡಿಯ ರುದ್ರ ಬಂಧಿತ ಆರೋಪಿ, ಈತನಿಂದ ಎರಡು ಕೆ.ಜಿಯಷ್ಟು ಜಿಂಕೆ ಮಾಂಸ, ಕೃತ್ಯಕ್ಕೆ ಬಳಸಿದ್ದ ಬೈಕ್, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಕಪ್ಪನಕಟ್ಟೆ ಹಾಡಿಯ ರಾಮು ಹಾಗೂ ಅವ್ವು ತಲೆ ಮರೆಸಿಕೊಂಡಿದ್ದಾರೆ.
ಆರೋಪಿಗಳು ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಿಭಾಗದ ಆರ್.ಎಫ್.ಓ.ಸುಬ್ರಮಣ್ಯ ಕೆ.ಇ, ಆನೆಚೌಕೂರು ವಲಯದ ಡಿಆರ್ಎಫ್ಓ ಶಿವಕುಮಾರ್ ಹಾಗೂ ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿ ಹನಗೋಡಿಗೆ ಸಮೀಪದ ಕಿರಂಗೂರು ಗೇಟ್ ಬಳಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು, ಉಳಿದಿಬ್ಬರು ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಪಿ.ಎ.ಸೀಮಾ ತಿಳಿಸಿದ್ದಾರೆ.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…