ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಉದ್ಯಾನದಂಚಿನ ಹನಗೋಡು ಹೋಬಳಿಯ ಭರತವಾಡಿ ಹಾಡಿಯ ರುದ್ರ ಬಂಧಿತ ಆರೋಪಿ, ಈತನಿಂದ ಎರಡು ಕೆ.ಜಿಯಷ್ಟು ಜಿಂಕೆ ಮಾಂಸ, ಕೃತ್ಯಕ್ಕೆ ಬಳಸಿದ್ದ ಬೈಕ್, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಕಪ್ಪನಕಟ್ಟೆ ಹಾಡಿಯ ರಾಮು ಹಾಗೂ ಅವ್ವು ತಲೆ ಮರೆಸಿಕೊಂಡಿದ್ದಾರೆ.
ಆರೋಪಿಗಳು ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಿಭಾಗದ ಆರ್.ಎಫ್.ಓ.ಸುಬ್ರಮಣ್ಯ ಕೆ.ಇ, ಆನೆಚೌಕೂರು ವಲಯದ ಡಿಆರ್ಎಫ್ಓ ಶಿವಕುಮಾರ್ ಹಾಗೂ ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿ ಹನಗೋಡಿಗೆ ಸಮೀಪದ ಕಿರಂಗೂರು ಗೇಟ್ ಬಳಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು, ಉಳಿದಿಬ್ಬರು ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಪಿ.ಎ.ಸೀಮಾ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…