ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಉದ್ಯಾನದಂಚಿನ ಹನಗೋಡು ಹೋಬಳಿಯ ಭರತವಾಡಿ ಹಾಡಿಯ ರುದ್ರ ಬಂಧಿತ ಆರೋಪಿ, ಈತನಿಂದ ಎರಡು ಕೆ.ಜಿಯಷ್ಟು ಜಿಂಕೆ ಮಾಂಸ, ಕೃತ್ಯಕ್ಕೆ ಬಳಸಿದ್ದ ಬೈಕ್, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಕಪ್ಪನಕಟ್ಟೆ ಹಾಡಿಯ ರಾಮು ಹಾಗೂ ಅವ್ವು ತಲೆ ಮರೆಸಿಕೊಂಡಿದ್ದಾರೆ.
ಆರೋಪಿಗಳು ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಿಭಾಗದ ಆರ್.ಎಫ್.ಓ.ಸುಬ್ರಮಣ್ಯ ಕೆ.ಇ, ಆನೆಚೌಕೂರು ವಲಯದ ಡಿಆರ್ಎಫ್ಓ ಶಿವಕುಮಾರ್ ಹಾಗೂ ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿ ಹನಗೋಡಿಗೆ ಸಮೀಪದ ಕಿರಂಗೂರು ಗೇಟ್ ಬಳಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು, ಉಳಿದಿಬ್ಬರು ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ ಪಿ.ಎ.ಸೀಮಾ ತಿಳಿಸಿದ್ದಾರೆ.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…