Categories: ಕೊಡಗು

ನಾಗರಹೊಳೆ ಸಮೀಪ ವೀರನ ಹೊಸಳ್ಳಿಯಲ್ಲಿ ಜಿಂಕೆ ಬೇಟೆ: ಓರ್ವನ ಬಂಧನ: ಇಬ್ಬರು ಪರಾರಿ

ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ಪ್ರಾದೇಶಿಕ ಅರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ವೇಳೆ ಆರೋಪಿಯನ್ನು ಕಿರಂಗೂರು ಗೇಟ್ ಬಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರೆ. ಮತ್ತಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಉದ್ಯಾನದಂಚಿನ ಹನಗೋಡು ಹೋಬಳಿಯ ಭರತವಾಡಿ ಹಾಡಿಯ ರುದ್ರ ಬಂಧಿತ ಆರೋಪಿ, ಈತನಿಂದ ಎರಡು ಕೆ.ಜಿಯಷ್ಟು ಜಿಂಕೆ ಮಾಂಸ, ಕೃತ್ಯಕ್ಕೆ ಬಳಸಿದ್ದ ಬೈಕ್, ಒಂದು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ಕಪ್ಪನಕಟ್ಟೆ ಹಾಡಿಯ ರಾಮು ಹಾಗೂ ಅವ್ವು ತಲೆ ಮರೆಸಿಕೊಂಡಿದ್ದಾರೆ.

ಆರೋಪಿಗಳು ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಹುಣಸೂರು ವನ್ಯಜೀವಿ ವಿಭಾಗದ ಆರ್.ಎಫ್.ಓ.ಸುಬ್ರಮಣ್ಯ ಕೆ.ಇ, ಆನೆಚೌಕೂರು ವಲಯದ ಡಿಆರ್ಎಫ್ಓ ಶಿವಕುಮಾರ್ ಹಾಗೂ ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿ ಹನಗೋಡಿಗೆ ಸಮೀಪದ ಕಿರಂಗೂರು ಗೇಟ್ ಬಳಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು, ಉಳಿದಿಬ್ಬರು ಆರೋಪಿಗಳ ಪತ್ತೆಗೆ ಕ್ರಮವಹಿಸಲಾಗಿದೆ ಎಂದು ನಾಗರಹೊಳೆ ಹುಲಿಯೋಜನೆ ನಿರ್ದೇಶಕಿ  ಪಿ.ಎ.ಸೀಮಾ ತಿಳಿಸಿದ್ದಾರೆ.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

5 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

11 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

14 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

15 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

17 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

19 hours ago