Categories: ರಾಜ್ಯ

ನಾಗರಹೊಳೆ ಹುಲಿ ಸಂರಕ್ಷಿತರಣ್ಯದ ಕರ್ನಾಟಕದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಪಿ.ಎ.ಸೀಮಾ ನೇಮಕ

ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ, ಮೂಲತಹ ನಾಪೋಕ್ಲುವಿನ ಪಾಡ್ಯಮಂಡ ಆನಂದ್ (ಸಾಬು)-ಕಮಲ ದಂಪತಿ ಪುತ್ರಿ ಪಿ.ಎ ಸೀಮಾ ರವರು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ಮೊಟ್ಟ ಮೊದಲ ಮಹಿಳಾ  ನಿರ್ದೇಶಕಿಯಾಗಿ ಆಗಸ್ಟ್ 14ರಂದು ನೇಮಕಗೊಂಡಿದ್ದಾರೆ.

ಕರ್ನಾಟಕ ಸರ್ಕಾರದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಿದ ಮಹಿಳೆ ಎಂದೆನಿಸಿಕೊಂಡಿದ್ದಾರೆ.

ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಗುಂಪಿನ ಇವರು ಮೈಸೂರು, ಮಂಡ್ಯ ಹುಣಸೂರು, ಮಡಿಕೇರಿಯಲ್ಲಿ ಡಿ ಸಿ ಎಫ್ ಆಗಿ ಸೇವೆ ಸಲ್ಲಿಸಿದ್ದರು.

ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು  ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ ಕರ್ನಾಟಕ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿ ಭಾಗವನ್ನು ಕೂಡ ಹೊಂದಿದ್ದು, ಇಲ್ಲಿ ನಿರಂತರ ಬೇಟೆಯಾಡುವುದು ಹಾಗೂ ಆನೆ ಮಾನವ ನಡುವೆ ಸಂಘರ್ಷವನ್ನು ತಡೆಗಟ್ಟಲು  ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ.ಎ ಸೀಮಾ ರವರ ಆಯ್ಕೆ ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.

Ramesh Babu

Journalist

Recent Posts

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

1 hour ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

14 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

16 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

17 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

18 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

1 day ago