ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ, ಮೂಲತಹ ನಾಪೋಕ್ಲುವಿನ ಪಾಡ್ಯಮಂಡ ಆನಂದ್ (ಸಾಬು)-ಕಮಲ ದಂಪತಿ ಪುತ್ರಿ ಪಿ.ಎ ಸೀಮಾ ರವರು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಆಗಸ್ಟ್ 14ರಂದು ನೇಮಕಗೊಂಡಿದ್ದಾರೆ.
ಕರ್ನಾಟಕ ಸರ್ಕಾರದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಿದ ಮಹಿಳೆ ಎಂದೆನಿಸಿಕೊಂಡಿದ್ದಾರೆ.
ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಗುಂಪಿನ ಇವರು ಮೈಸೂರು, ಮಂಡ್ಯ ಹುಣಸೂರು, ಮಡಿಕೇರಿಯಲ್ಲಿ ಡಿ ಸಿ ಎಫ್ ಆಗಿ ಸೇವೆ ಸಲ್ಲಿಸಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ ಕರ್ನಾಟಕ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿ ಭಾಗವನ್ನು ಕೂಡ ಹೊಂದಿದ್ದು, ಇಲ್ಲಿ ನಿರಂತರ ಬೇಟೆಯಾಡುವುದು ಹಾಗೂ ಆನೆ ಮಾನವ ನಡುವೆ ಸಂಘರ್ಷವನ್ನು ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ.ಎ ಸೀಮಾ ರವರ ಆಯ್ಕೆ ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…