ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ, ಮೂಲತಹ ನಾಪೋಕ್ಲುವಿನ ಪಾಡ್ಯಮಂಡ ಆನಂದ್ (ಸಾಬು)-ಕಮಲ ದಂಪತಿ ಪುತ್ರಿ ಪಿ.ಎ ಸೀಮಾ ರವರು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಆಗಸ್ಟ್ 14ರಂದು ನೇಮಕಗೊಂಡಿದ್ದಾರೆ.
ಕರ್ನಾಟಕ ಸರ್ಕಾರದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಿದ ಮಹಿಳೆ ಎಂದೆನಿಸಿಕೊಂಡಿದ್ದಾರೆ.
ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಗುಂಪಿನ ಇವರು ಮೈಸೂರು, ಮಂಡ್ಯ ಹುಣಸೂರು, ಮಡಿಕೇರಿಯಲ್ಲಿ ಡಿ ಸಿ ಎಫ್ ಆಗಿ ಸೇವೆ ಸಲ್ಲಿಸಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ ಕರ್ನಾಟಕ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿ ಭಾಗವನ್ನು ಕೂಡ ಹೊಂದಿದ್ದು, ಇಲ್ಲಿ ನಿರಂತರ ಬೇಟೆಯಾಡುವುದು ಹಾಗೂ ಆನೆ ಮಾನವ ನಡುವೆ ಸಂಘರ್ಷವನ್ನು ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ.ಎ ಸೀಮಾ ರವರ ಆಯ್ಕೆ ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…