ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ, ಮೂಲತಹ ನಾಪೋಕ್ಲುವಿನ ಪಾಡ್ಯಮಂಡ ಆನಂದ್ (ಸಾಬು)-ಕಮಲ ದಂಪತಿ ಪುತ್ರಿ ಪಿ.ಎ ಸೀಮಾ ರವರು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಆಗಸ್ಟ್ 14ರಂದು ನೇಮಕಗೊಂಡಿದ್ದಾರೆ.
ಕರ್ನಾಟಕ ಸರ್ಕಾರದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಿದ ಮಹಿಳೆ ಎಂದೆನಿಸಿಕೊಂಡಿದ್ದಾರೆ.
ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಗುಂಪಿನ ಇವರು ಮೈಸೂರು, ಮಂಡ್ಯ ಹುಣಸೂರು, ಮಡಿಕೇರಿಯಲ್ಲಿ ಡಿ ಸಿ ಎಫ್ ಆಗಿ ಸೇವೆ ಸಲ್ಲಿಸಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ ಕರ್ನಾಟಕ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿ ಭಾಗವನ್ನು ಕೂಡ ಹೊಂದಿದ್ದು, ಇಲ್ಲಿ ನಿರಂತರ ಬೇಟೆಯಾಡುವುದು ಹಾಗೂ ಆನೆ ಮಾನವ ನಡುವೆ ಸಂಘರ್ಷವನ್ನು ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ.ಎ ಸೀಮಾ ರವರ ಆಯ್ಕೆ ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…