ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ, ಮೂಲತಹ ನಾಪೋಕ್ಲುವಿನ ಪಾಡ್ಯಮಂಡ ಆನಂದ್ (ಸಾಬು)-ಕಮಲ ದಂಪತಿ ಪುತ್ರಿ ಪಿ.ಎ ಸೀಮಾ ರವರು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಆಗಸ್ಟ್ 14ರಂದು ನೇಮಕಗೊಂಡಿದ್ದಾರೆ.
ಕರ್ನಾಟಕ ಸರ್ಕಾರದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಿದ ಮಹಿಳೆ ಎಂದೆನಿಸಿಕೊಂಡಿದ್ದಾರೆ.
ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಗುಂಪಿನ ಇವರು ಮೈಸೂರು, ಮಂಡ್ಯ ಹುಣಸೂರು, ಮಡಿಕೇರಿಯಲ್ಲಿ ಡಿ ಸಿ ಎಫ್ ಆಗಿ ಸೇವೆ ಸಲ್ಲಿಸಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ ಕರ್ನಾಟಕ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿ ಭಾಗವನ್ನು ಕೂಡ ಹೊಂದಿದ್ದು, ಇಲ್ಲಿ ನಿರಂತರ ಬೇಟೆಯಾಡುವುದು ಹಾಗೂ ಆನೆ ಮಾನವ ನಡುವೆ ಸಂಘರ್ಷವನ್ನು ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ.ಎ ಸೀಮಾ ರವರ ಆಯ್ಕೆ ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…