ಭಾರತೀಯ ಅರಣ್ಯ ಸೇವೆ (IFS) ಅಧಿಕಾರಿ, ಮೂಲತಹ ನಾಪೋಕ್ಲುವಿನ ಪಾಡ್ಯಮಂಡ ಆನಂದ್ (ಸಾಬು)-ಕಮಲ ದಂಪತಿ ಪುತ್ರಿ ಪಿ.ಎ ಸೀಮಾ ರವರು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದ ಮೊಟ್ಟ ಮೊದಲ ಮಹಿಳಾ ನಿರ್ದೇಶಕಿಯಾಗಿ ಆಗಸ್ಟ್ 14ರಂದು ನೇಮಕಗೊಂಡಿದ್ದಾರೆ.
ಕರ್ನಾಟಕ ಸರ್ಕಾರದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಪ್ರತಿಷ್ಠಿತ ಹುದ್ದೆಯನ್ನು ಅಲಂಕರಿಸಿದ ಮಹಿಳೆ ಎಂದೆನಿಸಿಕೊಂಡಿದ್ದಾರೆ.
ಸೀಮಾ ಅವರು ಈ ಹಿಂದೆ ಹುಣಸೂರು ವಿಭಾಗದ ಡಿ.ಸಿ.ಎಫ್ ಆಗಿ ಸೇವೆ ಸಲಿಸಿದ್ದರು. 2017ರ ಗುಂಪಿನ ಇವರು ಮೈಸೂರು, ಮಂಡ್ಯ ಹುಣಸೂರು, ಮಡಿಕೇರಿಯಲ್ಲಿ ಡಿ ಸಿ ಎಫ್ ಆಗಿ ಸೇವೆ ಸಲ್ಲಿಸಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಆನೆಗಳ ಕಾರ್ಯಪಡೆಯ ಹೆಚ್ಚುವರಿ ಡಿ.ಸಿ.ಎಫ್ ಆಗಿ ಕಾರ್ಯನಿರ್ವಹಿಸಿ ಹುಣಸೂರು ಹಾಗೂ ಕೆ ಆರ್ ನಗರದ ವಿಭಾಗದಲ್ಲಿ ಮಾನವ ಹಾಗೂ ಆನೆಗಳ ನಡುವೆ ಸಂಘರ್ಷವನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿ ಪ್ರಶಂಸೆಗೆ ಒಳಗಾಗಿದ್ದರು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಕೇರಳ ಕರ್ನಾಟಕ ಭಾಗ ಹಾಗೂ ಕೊಡಗು ಮತ್ತು ಮೈಸೂರು ಗಡಿ ಭಾಗವನ್ನು ಕೂಡ ಹೊಂದಿದ್ದು, ಇಲ್ಲಿ ನಿರಂತರ ಬೇಟೆಯಾಡುವುದು ಹಾಗೂ ಆನೆ ಮಾನವ ನಡುವೆ ಸಂಘರ್ಷವನ್ನು ತಡೆಗಟ್ಟಲು ಉತ್ತಮ ಅಧಿಕಾರಿಯ ನಿರೀಕ್ಷೆಯಲ್ಲಿದ್ದ ಸ್ಥಳೀಯರಿಗೆ ಪಿ.ಎ ಸೀಮಾ ರವರ ಆಯ್ಕೆ ಹೆಚ್ಚಿನ ನಿರೀಕ್ಷೆಯನ್ನು ಮೂಡಿಸಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…