ನಾಗರ ಪಂಚಮಿ: ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗಾರಾಧನೆ

ಇಂದು ನಾಡಿನಾದ್ಯಂತ ಶ್ರಾವಣ ಮಾಸದ ಮೊದಲ‌ ಹಬ್ಬವಾದ ನಾಗರ ಪಂಚಮಿ ಹಿನ್ನೆಲೆ, ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗದೋಷ ನಿವಾರಣೆಗಾಗಿ ನಾಗರಕಲ್ಲುಗಳಿಗೆ ಹಾಲು, ತುಪ್ಪ, ನೀರು ಎರೆದು ಪೂಜೆ ಸಲ್ಲಿಸಿದ ಭಕ್ತಾದಿಗಳು.

ನಾಗರ ಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು ಅರಿಶಿನ ಕುಂಕುಮ ಹೂಗಳಿಂದ ಅಲಂಕರಿಸಿದ ನಂತರ ನಾಗರ ಕಲ್ಲಿಗೆ ಹಾಲೆರೆದು ಹರಕೆ ತೀರಿಸಿದ ಭಕ್ತಾದಿಗಳು. ಪ್ರತಿ ವರ್ಷ ನಾಗರಪಂಚಮಿ ದಿನದಂದು ನಾಗರಕಲ್ಲಿಗೆ ತಣ್ಣೀರು ಎರೆದರೆ ಸರ್ಪದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಹಿನ್ನೆಲೆ ನಾಗ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ತಣ್ಣೀರು ಎರೆದ ಭಕ್ತರು.

ಕ್ಷೇತ್ರದಲ್ಲಿ ಸಾವಿರಾರು ನಾಗರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ. ದೇವಾಲಯದ ಹೊರಗೆ ಸುಮಾರು 10 ಸಾವಿರಕ್ಕೂ ಹೆಚ್ಚು ನಾಗರಕಲ್ಲುಗಳನ್ನು ಪ್ರತಿಷ್ಠಾಪಿಸಲಾಗಿದೆ.

ನಾವು ಯಾವುದೇ ಶುಭ ಕಾರ್ಯ ಮಾಡಬೇಕೆಂದರೆ ಗಣಪತಿ ಹಾಗೂ ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ಅನುಗ್ರಹ ಬೇಕೆ ಬೇಕು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಘಾಟಿ ಕ್ಷೇತ್ರದಲ್ಲಿ ನಾಗಾರಾಧನೆ‌ ಮಾಡುತ್ತಿದ್ದೇವೆ. ದೇವರು ನಮಗೆ ಎಲ್ಲಾ ರೀತಿಯಲ್ಲಿ ಒಳ್ಳೆದು ಮಾಡಿದ್ದಾರೆ ಎಂದು ಶಶಿಕಲಾ ತಿಳಿಸಿದರು.

ಘಾಟಿ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿರುವ ನಾಗರ‌ಕಲ್ಲಿಗೆ ಹಾಲಿನಾಭಿಷೇಕ, ತುಪ್ಪದಾಭಿಷೇಕ, ನೀರಿನಾಭಿಷೇಕ ಮಾಡಿದರೆ ನಾಗದೋಷ‌ ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿಂದ ಕಳೆದ ಹತ್ತು ವರ್ಷಗಳಿಂದಲೇ ದೇವಸ್ಥಾನ ಹಿಂಭಾಗದಲ್ಲಿ ನಾಗರ ಕಲ್ಲನ್ನು ಪ್ರತಿಷ್ಠಾಪಿಸಿ ಪ್ರತಿ ವರ್ಷ ಪೂಜೆ ಪುನಸ್ಕಾರ ಮಾಡುತ್ತಿರುವುದರಿಂದ ನಮಗೆ ಒಳ್ಳೆಯದು ಆಗಿದೆ ಎಂದು ಶಿವಕುಮಾರ್ ತಿಳಿಸಿದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

6 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

7 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

18 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

21 hours ago