ನಾಗರ ಪಂಚಮಿ: ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗಾರಾಧನೆ

ಇಂದು ನಾಡಿನಾದ್ಯಂತ ಶ್ರಾವಣ ಮಾಸದ ಮೊದಲ‌ ಹಬ್ಬವಾದ ನಾಗರ ಪಂಚಮಿ ಹಿನ್ನೆಲೆ, ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗದೋಷ ನಿವಾರಣೆಗಾಗಿ ನಾಗರಕಲ್ಲುಗಳಿಗೆ ಹಾಲು, ತುಪ್ಪ, ನೀರು ಎರೆದು ಪೂಜೆ ಸಲ್ಲಿಸಿದ ಭಕ್ತಾದಿಗಳು.

ನಾಗರ ಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು ಅರಿಶಿನ ಕುಂಕುಮ ಹೂಗಳಿಂದ ಅಲಂಕರಿಸಿದ ನಂತರ ನಾಗರ ಕಲ್ಲಿಗೆ ಹಾಲೆರೆದು ಹರಕೆ ತೀರಿಸಿದ ಭಕ್ತಾದಿಗಳು. ಪ್ರತಿ ವರ್ಷ ನಾಗರಪಂಚಮಿ ದಿನದಂದು ನಾಗರಕಲ್ಲಿಗೆ ತಣ್ಣೀರು ಎರೆದರೆ ಸರ್ಪದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಹಿನ್ನೆಲೆ ನಾಗ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ತಣ್ಣೀರು ಎರೆದ ಭಕ್ತರು.

ಕ್ಷೇತ್ರದಲ್ಲಿ ಸಾವಿರಾರು ನಾಗರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ. ದೇವಾಲಯದ ಹೊರಗೆ ಸುಮಾರು 10 ಸಾವಿರಕ್ಕೂ ಹೆಚ್ಚು ನಾಗರಕಲ್ಲುಗಳನ್ನು ಪ್ರತಿಷ್ಠಾಪಿಸಲಾಗಿದೆ.

ನಾವು ಯಾವುದೇ ಶುಭ ಕಾರ್ಯ ಮಾಡಬೇಕೆಂದರೆ ಗಣಪತಿ ಹಾಗೂ ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ಅನುಗ್ರಹ ಬೇಕೆ ಬೇಕು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಘಾಟಿ ಕ್ಷೇತ್ರದಲ್ಲಿ ನಾಗಾರಾಧನೆ‌ ಮಾಡುತ್ತಿದ್ದೇವೆ. ದೇವರು ನಮಗೆ ಎಲ್ಲಾ ರೀತಿಯಲ್ಲಿ ಒಳ್ಳೆದು ಮಾಡಿದ್ದಾರೆ ಎಂದು ಶಶಿಕಲಾ ತಿಳಿಸಿದರು.

ಘಾಟಿ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿರುವ ನಾಗರ‌ಕಲ್ಲಿಗೆ ಹಾಲಿನಾಭಿಷೇಕ, ತುಪ್ಪದಾಭಿಷೇಕ, ನೀರಿನಾಭಿಷೇಕ ಮಾಡಿದರೆ ನಾಗದೋಷ‌ ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿಂದ ಕಳೆದ ಹತ್ತು ವರ್ಷಗಳಿಂದಲೇ ದೇವಸ್ಥಾನ ಹಿಂಭಾಗದಲ್ಲಿ ನಾಗರ ಕಲ್ಲನ್ನು ಪ್ರತಿಷ್ಠಾಪಿಸಿ ಪ್ರತಿ ವರ್ಷ ಪೂಜೆ ಪುನಸ್ಕಾರ ಮಾಡುತ್ತಿರುವುದರಿಂದ ನಮಗೆ ಒಳ್ಳೆಯದು ಆಗಿದೆ ಎಂದು ಶಿವಕುಮಾರ್ ತಿಳಿಸಿದರು.

Ramesh Babu

Journalist

Recent Posts

ಸಂಭ್ರಮದ ಹಸಿ ಕರಗ ಮಹೋತ್ಸವ

  ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ…

35 minutes ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

38 minutes ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

40 minutes ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

3 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

6 hours ago

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿತ: ಇಬ್ಬರು ಮಕ್ಕಳು ಸೇರಿ 7 ಮಂದಿ ಬೀದಿಬದಿಯ ವ್ಯಾಪಾರಿಗಳ ದುರ್ಮರಣ

ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ…

22 hours ago