ನಾಗರ ಪಂಚಮಿ: ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮದ ನಾಗಾರಾಧನೆ

ಇಂದು ನಾಡಿನಾದ್ಯಂತ ಶ್ರಾವಣ ಮಾಸದ ಮೊದಲ‌ ಹಬ್ಬವಾದ ನಾಗರ ಪಂಚಮಿ ಹಿನ್ನೆಲೆ, ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗದೋಷ ನಿವಾರಣೆಗಾಗಿ ನಾಗರಕಲ್ಲುಗಳಿಗೆ ಹಾಲು, ತುಪ್ಪ, ನೀರು ಎರೆದು ಪೂಜೆ ಸಲ್ಲಿಸಿದ ಭಕ್ತಾದಿಗಳು.

ನಾಗರ ಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು ಅರಿಶಿನ ಕುಂಕುಮ ಹೂಗಳಿಂದ ಅಲಂಕರಿಸಿದ ನಂತರ ನಾಗರ ಕಲ್ಲಿಗೆ ಹಾಲೆರೆದು ಹರಕೆ ತೀರಿಸಿದ ಭಕ್ತಾದಿಗಳು. ಪ್ರತಿ ವರ್ಷ ನಾಗರಪಂಚಮಿ ದಿನದಂದು ನಾಗರಕಲ್ಲಿಗೆ ತಣ್ಣೀರು ಎರೆದರೆ ಸರ್ಪದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಹಿನ್ನೆಲೆ ನಾಗ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ತಣ್ಣೀರು ಎರೆದ ಭಕ್ತರು.

ಕ್ಷೇತ್ರದಲ್ಲಿ ಸಾವಿರಾರು ನಾಗರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ. ದೇವಾಲಯದ ಹೊರಗೆ ಸುಮಾರು 10 ಸಾವಿರಕ್ಕೂ ಹೆಚ್ಚು ನಾಗರಕಲ್ಲುಗಳನ್ನು ಪ್ರತಿಷ್ಠಾಪಿಸಲಾಗಿದೆ.

ನಾವು ಯಾವುದೇ ಶುಭ ಕಾರ್ಯ ಮಾಡಬೇಕೆಂದರೆ ಗಣಪತಿ ಹಾಗೂ ಶ್ರೀ ಘಾಟಿ ಸುಬ್ರಹ್ಮಣ್ಯ ದೇವರ ಅನುಗ್ರಹ ಬೇಕೆ ಬೇಕು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಘಾಟಿ ಕ್ಷೇತ್ರದಲ್ಲಿ ನಾಗಾರಾಧನೆ‌ ಮಾಡುತ್ತಿದ್ದೇವೆ. ದೇವರು ನಮಗೆ ಎಲ್ಲಾ ರೀತಿಯಲ್ಲಿ ಒಳ್ಳೆದು ಮಾಡಿದ್ದಾರೆ ಎಂದು ಶಶಿಕಲಾ ತಿಳಿಸಿದರು.

ಘಾಟಿ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿರುವ ನಾಗರ‌ಕಲ್ಲಿಗೆ ಹಾಲಿನಾಭಿಷೇಕ, ತುಪ್ಪದಾಭಿಷೇಕ, ನೀರಿನಾಭಿಷೇಕ ಮಾಡಿದರೆ ನಾಗದೋಷ‌ ನಿವಾರಣೆಯಾಗುತ್ತದೆ ಎಂಬ ನಂಬಿಕೆಯಿಂದ ಕಳೆದ ಹತ್ತು ವರ್ಷಗಳಿಂದಲೇ ದೇವಸ್ಥಾನ ಹಿಂಭಾಗದಲ್ಲಿ ನಾಗರ ಕಲ್ಲನ್ನು ಪ್ರತಿಷ್ಠಾಪಿಸಿ ಪ್ರತಿ ವರ್ಷ ಪೂಜೆ ಪುನಸ್ಕಾರ ಮಾಡುತ್ತಿರುವುದರಿಂದ ನಮಗೆ ಒಳ್ಳೆಯದು ಆಗಿದೆ ಎಂದು ಶಿವಕುಮಾರ್ ತಿಳಿಸಿದರು.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 hour ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

6 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

8 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

11 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago