ಚಿಕ್ಕಬಳ್ಳಾಪುರ: ನಾಟಿ ಔಷಧಿಯಿಂದ 8 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ನಲ್ಲಗುಟ್ಟ ಪಾಳ್ಯದಲ್ಲಿ ನಡೆದಿದೆ.
ಶಶಿಕಲಾ ಹಾಗೂ ಶ್ರೀನಿವಾಸ್ ದಂಪತಿಯ ಪುತ್ರ ವೇದೇಶ್(8) ಮೃತಪಟ್ಟ ಬಾಲಕ. ಮಗನಿಗೆ ನಾಟಿ ಔಷಧಿ ಕುಡಿಸಿದ ಶ್ರೀನಿವಾಸ್ ತಾನೂ ಕೂಡ ಕುಡಿದು ಮತ್ತೋರ್ವ ಪುತ್ರಿಗೂ ನೀಡಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ಎಲ್ಲರೂ ಅಸ್ವಸ್ಥಗೊಂಡಿದ್ದು ಕೂಡಲೇ ತಂದೆ-ಮಗಳು ಆಸ್ಪತ್ರೆ ಸೇರಿದರೆ 8 ವರ್ಷದ ಬಾಲಕ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ವೇಳೆ ಮಗು ಹೊಟ್ಟೆ ಉರಿ ಎಂದು ಒದ್ದಾಡುತ್ತಿರುತ್ತದೆ. ಆಗ ನಾಟಿ ಔಷಧಿ ವೈದ್ಯನಿಗೆ ಕರೆ ಮಾಡಿದಾಗ, ಆ ಔಷಧಿ ಹಾಗೇ, ಸ್ವಲ್ಪ ಹೊತ್ತು ಹೋದರೆ ಎಲ್ಲಾ ಸರಿ ಹೋಗುತ್ತೆ ಎಂದು ಹೇಳುತ್ತಾನೆ. ಅಷ್ಟರ ವೇಳೆ ತಂದೆ ಮತ್ತು ಮಗಳಿಗೂ ಇದರ ಎಫೆಕ್ಟ್ ಕಾಣಿಸುತ್ತದೆ. ತಕ್ಷಣ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರುತ್ತಾರೆ. ವೈದ್ಯರು ಚಿಕಿತ್ಸೆ ನೀಡಿದ ಕಾರಣ ತಂದೆ ಮತ್ತು ಮಗು ಪ್ರಾಣಾಪಾಯದಿಂದ ಪಾರಾಗುತ್ತಾರೆ. ಆದರೆ ಮೂರು ದಿನಗಳಿಂದ ಗಂಡು ಮಗು ವೇದೇಶ್ ಗೆ ನಾಟಿ ಔಷಧಿ ಕುಡಿಸಿದ್ದ ಕಾರಣ ಮಗು ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪುತ್ತಾನೆ.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…