ನಾಟಿ ಔಷಧಿ ಕುಡಿದು ಮಗು ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಚಿಕ್ಕಬಳ್ಳಾಪುರ: ನಾಟಿ ಔಷಧಿಯಿಂದ 8 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ನಲ್ಲಗುಟ್ಟ ಪಾ‍ಳ್ಯದಲ್ಲಿ ನಡೆದಿದೆ.

ಶಶಿಕಲಾ ಹಾಗೂ ಶ್ರೀನಿವಾಸ್ ದಂಪತಿಯ ಪುತ್ರ ವೇದೇಶ್(8) ಮೃತಪಟ್ಟ ಬಾಲಕ. ಮಗನಿಗೆ ನಾಟಿ ಔಷಧಿ ಕುಡಿಸಿದ ಶ್ರೀನಿವಾಸ್ ತಾನೂ ಕೂಡ ಕುಡಿದು ಮತ್ತೋರ್ವ ಪುತ್ರಿಗೂ ನೀಡಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ಎಲ್ಲರೂ ಅಸ್ವಸ್ಥಗೊಂಡಿದ್ದು ಕೂಡಲೇ ತಂದೆ-ಮಗಳು ಆಸ್ಪತ್ರೆ ಸೇರಿದರೆ 8 ವರ್ಷದ ಬಾಲಕ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವೇದೇಶ್ ಎಂಬ ಮಗುವಿಗೆ ಕಿವಿಯ ಬಳಿ ಅಲರ್ಜಿ ಆಗಿರುತ್ತದೆ. ನಾನಾ ಕಡೆ ಚಿಕಿತ್ಸೆ ಕೊಡಿಸಿದರೂ ಕೂಡ ಅಲರ್ಜಿ ಕಡಿಮೆ ಆಗಿರಲಿಲ್ಲ. ಹಾಗಾಗಿ ಅಕ್ಕ ಪಕ್ಕದ ಮನೆಯವರು, ಈ ರೀತಿಯ ಸಮಸ್ಯೆಗಳಿಗೆ ಮಂತ್ರ ಹಾಕಿ ಔಷಧಿ ನೀಡುತ್ತಾರೆ ಎಂದು ಭೋಯಿನಹಳ್ಳಿಯ ಸತ್ಯನಾರಾಯಣ ಎಂಬಾತನ ಹೆಸರನ್ನು ಹೇಳುತ್ತಾರೆ. ಜನರ ಮಾತನ್ನೇ ನಂಬಿಕೊಂಡು ಸತ್ಯನಾರಾಯಣ ಬಳಿ ಹೋಗುತ್ತಾರೆ. ಮೊದಲು ಮಗುವನ್ನು ನೋಡಿ ಇದು ಒಂದೇ ಬಾರಿ ವಾಸಿ ಆಗಲ್ಲ. ನೀವು ಮೂರು ಬಾರಿ ಬರಬೇಕು ಎಂದು ಮಂತ್ರವಾದಿ ಹೇಳುತ್ತಾನೆ. ಮಂತ್ರವಾದಿಯ ಮಾತನ್ನು ಕೇಳಿ ಈಗ ಮಗುವನ್ನು ಕಳೆದುಕೊಂಡಿದೆ.

ಮಂತ್ರವಾದಿ ಬಳಿ ತೋರಿಸಿದಾಗ, ಮಂತ್ರ ಹಾಕಿದ್ದೇನೆ ಒಂದು ಔಷಧವನ್ನು ನೀಡುತ್ತೇನೆ, ಅದನ್ನ ಮೂರು ದಿನ ಕುಡಿಸಿ ಎಂದು ಹೇಳಿ ಒಂದು ಔಷಧಿಯನ್ನು ಕೊಡುತ್ತಾನೆ. ಅವನ ಮಾತನ್ನು ನಂಬಿಕೊಂಡು ಮಗುವಿಗೆ ಔಷಧಿ ಕೊಡುತ್ತಾರೆ. ಔಷಧಿ ತುಂಬಾ ಕಹಿ ಇದೆ ಎಂದು ಮಗು ಕುಡಿಯಲು ಹಠ ಮಾಡಿದಾಗ ಮಗುವಿನ ತಂದೆ ಮತ್ತು ಅಕ್ಕ ಕೂಡ ಹಠ ಮಾಡುತ್ತಿದ್ದ ಮಗುವಿನ ಮುಂದೆಯೇ ಕುಡಿದು ಆ ಮಗುವಿಗೂ ಕುಡಿಸುತ್ತಾರೆ.

ಈ ವೇಳೆ ಮಗು ಹೊಟ್ಟೆ ಉರಿ ಎಂದು ಒದ್ದಾಡುತ್ತಿರುತ್ತದೆ. ಆಗ ನಾಟಿ ಔಷಧಿ ವೈದ್ಯನಿಗೆ ಕರೆ ಮಾಡಿದಾಗ, ಆ ಔಷಧಿ ಹಾಗೇ, ಸ್ವಲ್ಪ‌ ಹೊತ್ತು ಹೋದರೆ ಎಲ್ಲಾ ಸರಿ ಹೋಗುತ್ತೆ ಎಂದು ಹೇಳುತ್ತಾನೆ. ಅಷ್ಟರ ವೇಳೆ ತಂದೆ ಮತ್ತು ಮಗಳಿಗೂ ಇದರ ಎಫೆಕ್ಟ್ ಕಾಣಿಸುತ್ತದೆ. ತಕ್ಷಣ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರುತ್ತಾರೆ. ವೈದ್ಯರು ಚಿಕಿತ್ಸೆ ನೀಡಿದ ಕಾರಣ ತಂದೆ ಮತ್ತು ಮಗು ಪ್ರಾಣಾಪಾಯದಿಂದ ಪಾರಾಗುತ್ತಾರೆ. ಆದರೆ ಮೂರು ದಿನಗಳಿಂದ ಗಂಡು ಮಗು ವೇದೇಶ್ ಗೆ ನಾಟಿ ಔಷಧಿ ಕುಡಿಸಿದ್ದ ಕಾರಣ ಮಗು ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪುತ್ತಾನೆ.

ಒಟ್ಟಾರೆ ಯಾರೋ ಮಂತ್ರವಾದಿಗಳು, ನಾಟಿ ವೈದ್ಯರು ಹೇಳಿದರು ಎಂದು ಕುರುಡಾಗಿ ನಂಬಿ ಅವರು ಹೇಳಿದ ಮಾತು ಕೇಳಿವ ವ್ಯಕ್ತಿಗಳು ಎಚ್ಚರಿಕೆಯಿಂದ ಇರಬೇಕಾಗಿದೆ. ನಾಟಿ ವೈದ್ಯನ ಮಾತು ಕೇಳಿ ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡು ಪೋಷಕರು ದಿಕ್ಕು ದೋಚದ ಪರಿಸ್ಥಿತಿಗೆ ತಲುಪಿದ್ದಾರೆ.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

11 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

12 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

16 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

18 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

21 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

22 hours ago