ನಾಟಿ ಔಷಧಿ ಕುಡಿದು ಮಗು ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಚಿಕ್ಕಬಳ್ಳಾಪುರ: ನಾಟಿ ಔಷಧಿಯಿಂದ 8 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ನಲ್ಲಗುಟ್ಟ ಪಾ‍ಳ್ಯದಲ್ಲಿ ನಡೆದಿದೆ.

ಶಶಿಕಲಾ ಹಾಗೂ ಶ್ರೀನಿವಾಸ್ ದಂಪತಿಯ ಪುತ್ರ ವೇದೇಶ್(8) ಮೃತಪಟ್ಟ ಬಾಲಕ. ಮಗನಿಗೆ ನಾಟಿ ಔಷಧಿ ಕುಡಿಸಿದ ಶ್ರೀನಿವಾಸ್ ತಾನೂ ಕೂಡ ಕುಡಿದು ಮತ್ತೋರ್ವ ಪುತ್ರಿಗೂ ನೀಡಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ಎಲ್ಲರೂ ಅಸ್ವಸ್ಥಗೊಂಡಿದ್ದು ಕೂಡಲೇ ತಂದೆ-ಮಗಳು ಆಸ್ಪತ್ರೆ ಸೇರಿದರೆ 8 ವರ್ಷದ ಬಾಲಕ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವೇದೇಶ್ ಎಂಬ ಮಗುವಿಗೆ ಕಿವಿಯ ಬಳಿ ಅಲರ್ಜಿ ಆಗಿರುತ್ತದೆ. ನಾನಾ ಕಡೆ ಚಿಕಿತ್ಸೆ ಕೊಡಿಸಿದರೂ ಕೂಡ ಅಲರ್ಜಿ ಕಡಿಮೆ ಆಗಿರಲಿಲ್ಲ. ಹಾಗಾಗಿ ಅಕ್ಕ ಪಕ್ಕದ ಮನೆಯವರು, ಈ ರೀತಿಯ ಸಮಸ್ಯೆಗಳಿಗೆ ಮಂತ್ರ ಹಾಕಿ ಔಷಧಿ ನೀಡುತ್ತಾರೆ ಎಂದು ಭೋಯಿನಹಳ್ಳಿಯ ಸತ್ಯನಾರಾಯಣ ಎಂಬಾತನ ಹೆಸರನ್ನು ಹೇಳುತ್ತಾರೆ. ಜನರ ಮಾತನ್ನೇ ನಂಬಿಕೊಂಡು ಸತ್ಯನಾರಾಯಣ ಬಳಿ ಹೋಗುತ್ತಾರೆ. ಮೊದಲು ಮಗುವನ್ನು ನೋಡಿ ಇದು ಒಂದೇ ಬಾರಿ ವಾಸಿ ಆಗಲ್ಲ. ನೀವು ಮೂರು ಬಾರಿ ಬರಬೇಕು ಎಂದು ಮಂತ್ರವಾದಿ ಹೇಳುತ್ತಾನೆ. ಮಂತ್ರವಾದಿಯ ಮಾತನ್ನು ಕೇಳಿ ಈಗ ಮಗುವನ್ನು ಕಳೆದುಕೊಂಡಿದೆ.

ಮಂತ್ರವಾದಿ ಬಳಿ ತೋರಿಸಿದಾಗ, ಮಂತ್ರ ಹಾಕಿದ್ದೇನೆ ಒಂದು ಔಷಧವನ್ನು ನೀಡುತ್ತೇನೆ, ಅದನ್ನ ಮೂರು ದಿನ ಕುಡಿಸಿ ಎಂದು ಹೇಳಿ ಒಂದು ಔಷಧಿಯನ್ನು ಕೊಡುತ್ತಾನೆ. ಅವನ ಮಾತನ್ನು ನಂಬಿಕೊಂಡು ಮಗುವಿಗೆ ಔಷಧಿ ಕೊಡುತ್ತಾರೆ. ಔಷಧಿ ತುಂಬಾ ಕಹಿ ಇದೆ ಎಂದು ಮಗು ಕುಡಿಯಲು ಹಠ ಮಾಡಿದಾಗ ಮಗುವಿನ ತಂದೆ ಮತ್ತು ಅಕ್ಕ ಕೂಡ ಹಠ ಮಾಡುತ್ತಿದ್ದ ಮಗುವಿನ ಮುಂದೆಯೇ ಕುಡಿದು ಆ ಮಗುವಿಗೂ ಕುಡಿಸುತ್ತಾರೆ.

ಈ ವೇಳೆ ಮಗು ಹೊಟ್ಟೆ ಉರಿ ಎಂದು ಒದ್ದಾಡುತ್ತಿರುತ್ತದೆ. ಆಗ ನಾಟಿ ಔಷಧಿ ವೈದ್ಯನಿಗೆ ಕರೆ ಮಾಡಿದಾಗ, ಆ ಔಷಧಿ ಹಾಗೇ, ಸ್ವಲ್ಪ‌ ಹೊತ್ತು ಹೋದರೆ ಎಲ್ಲಾ ಸರಿ ಹೋಗುತ್ತೆ ಎಂದು ಹೇಳುತ್ತಾನೆ. ಅಷ್ಟರ ವೇಳೆ ತಂದೆ ಮತ್ತು ಮಗಳಿಗೂ ಇದರ ಎಫೆಕ್ಟ್ ಕಾಣಿಸುತ್ತದೆ. ತಕ್ಷಣ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರುತ್ತಾರೆ. ವೈದ್ಯರು ಚಿಕಿತ್ಸೆ ನೀಡಿದ ಕಾರಣ ತಂದೆ ಮತ್ತು ಮಗು ಪ್ರಾಣಾಪಾಯದಿಂದ ಪಾರಾಗುತ್ತಾರೆ. ಆದರೆ ಮೂರು ದಿನಗಳಿಂದ ಗಂಡು ಮಗು ವೇದೇಶ್ ಗೆ ನಾಟಿ ಔಷಧಿ ಕುಡಿಸಿದ್ದ ಕಾರಣ ಮಗು ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪುತ್ತಾನೆ.

ಒಟ್ಟಾರೆ ಯಾರೋ ಮಂತ್ರವಾದಿಗಳು, ನಾಟಿ ವೈದ್ಯರು ಹೇಳಿದರು ಎಂದು ಕುರುಡಾಗಿ ನಂಬಿ ಅವರು ಹೇಳಿದ ಮಾತು ಕೇಳಿವ ವ್ಯಕ್ತಿಗಳು ಎಚ್ಚರಿಕೆಯಿಂದ ಇರಬೇಕಾಗಿದೆ. ನಾಟಿ ವೈದ್ಯನ ಮಾತು ಕೇಳಿ ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡು ಪೋಷಕರು ದಿಕ್ಕು ದೋಚದ ಪರಿಸ್ಥಿತಿಗೆ ತಲುಪಿದ್ದಾರೆ.

Ramesh Babu

Journalist

Recent Posts

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

2 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

2 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

4 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

5 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

5 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

5 hours ago