ಚಿಕ್ಕಬಳ್ಳಾಪುರ: ನಾಟಿ ಔಷಧಿಯಿಂದ 8 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ನಲ್ಲಗುಟ್ಟ ಪಾಳ್ಯದಲ್ಲಿ ನಡೆದಿದೆ.
ಶಶಿಕಲಾ ಹಾಗೂ ಶ್ರೀನಿವಾಸ್ ದಂಪತಿಯ ಪುತ್ರ ವೇದೇಶ್(8) ಮೃತಪಟ್ಟ ಬಾಲಕ. ಮಗನಿಗೆ ನಾಟಿ ಔಷಧಿ ಕುಡಿಸಿದ ಶ್ರೀನಿವಾಸ್ ತಾನೂ ಕೂಡ ಕುಡಿದು ಮತ್ತೋರ್ವ ಪುತ್ರಿಗೂ ನೀಡಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ಎಲ್ಲರೂ ಅಸ್ವಸ್ಥಗೊಂಡಿದ್ದು ಕೂಡಲೇ ತಂದೆ-ಮಗಳು ಆಸ್ಪತ್ರೆ ಸೇರಿದರೆ 8 ವರ್ಷದ ಬಾಲಕ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ವೇಳೆ ಮಗು ಹೊಟ್ಟೆ ಉರಿ ಎಂದು ಒದ್ದಾಡುತ್ತಿರುತ್ತದೆ. ಆಗ ನಾಟಿ ಔಷಧಿ ವೈದ್ಯನಿಗೆ ಕರೆ ಮಾಡಿದಾಗ, ಆ ಔಷಧಿ ಹಾಗೇ, ಸ್ವಲ್ಪ ಹೊತ್ತು ಹೋದರೆ ಎಲ್ಲಾ ಸರಿ ಹೋಗುತ್ತೆ ಎಂದು ಹೇಳುತ್ತಾನೆ. ಅಷ್ಟರ ವೇಳೆ ತಂದೆ ಮತ್ತು ಮಗಳಿಗೂ ಇದರ ಎಫೆಕ್ಟ್ ಕಾಣಿಸುತ್ತದೆ. ತಕ್ಷಣ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರುತ್ತಾರೆ. ವೈದ್ಯರು ಚಿಕಿತ್ಸೆ ನೀಡಿದ ಕಾರಣ ತಂದೆ ಮತ್ತು ಮಗು ಪ್ರಾಣಾಪಾಯದಿಂದ ಪಾರಾಗುತ್ತಾರೆ. ಆದರೆ ಮೂರು ದಿನಗಳಿಂದ ಗಂಡು ಮಗು ವೇದೇಶ್ ಗೆ ನಾಟಿ ಔಷಧಿ ಕುಡಿಸಿದ್ದ ಕಾರಣ ಮಗು ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪುತ್ತಾನೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…