ಚಿಕ್ಕಬಳ್ಳಾಪುರ: ನಾಟಿ ಔಷಧಿಯಿಂದ 8 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ನಲ್ಲಗುಟ್ಟ ಪಾಳ್ಯದಲ್ಲಿ ನಡೆದಿದೆ.
ಶಶಿಕಲಾ ಹಾಗೂ ಶ್ರೀನಿವಾಸ್ ದಂಪತಿಯ ಪುತ್ರ ವೇದೇಶ್(8) ಮೃತಪಟ್ಟ ಬಾಲಕ. ಮಗನಿಗೆ ನಾಟಿ ಔಷಧಿ ಕುಡಿಸಿದ ಶ್ರೀನಿವಾಸ್ ತಾನೂ ಕೂಡ ಕುಡಿದು ಮತ್ತೋರ್ವ ಪುತ್ರಿಗೂ ನೀಡಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ಎಲ್ಲರೂ ಅಸ್ವಸ್ಥಗೊಂಡಿದ್ದು ಕೂಡಲೇ ತಂದೆ-ಮಗಳು ಆಸ್ಪತ್ರೆ ಸೇರಿದರೆ 8 ವರ್ಷದ ಬಾಲಕ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ವೇಳೆ ಮಗು ಹೊಟ್ಟೆ ಉರಿ ಎಂದು ಒದ್ದಾಡುತ್ತಿರುತ್ತದೆ. ಆಗ ನಾಟಿ ಔಷಧಿ ವೈದ್ಯನಿಗೆ ಕರೆ ಮಾಡಿದಾಗ, ಆ ಔಷಧಿ ಹಾಗೇ, ಸ್ವಲ್ಪ ಹೊತ್ತು ಹೋದರೆ ಎಲ್ಲಾ ಸರಿ ಹೋಗುತ್ತೆ ಎಂದು ಹೇಳುತ್ತಾನೆ. ಅಷ್ಟರ ವೇಳೆ ತಂದೆ ಮತ್ತು ಮಗಳಿಗೂ ಇದರ ಎಫೆಕ್ಟ್ ಕಾಣಿಸುತ್ತದೆ. ತಕ್ಷಣ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರುತ್ತಾರೆ. ವೈದ್ಯರು ಚಿಕಿತ್ಸೆ ನೀಡಿದ ಕಾರಣ ತಂದೆ ಮತ್ತು ಮಗು ಪ್ರಾಣಾಪಾಯದಿಂದ ಪಾರಾಗುತ್ತಾರೆ. ಆದರೆ ಮೂರು ದಿನಗಳಿಂದ ಗಂಡು ಮಗು ವೇದೇಶ್ ಗೆ ನಾಟಿ ಔಷಧಿ ಕುಡಿಸಿದ್ದ ಕಾರಣ ಮಗು ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪುತ್ತಾನೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…