ಚಿಕ್ಕಬಳ್ಳಾಪುರ: ನಾಟಿ ಔಷಧಿಯಿಂದ 8 ವರ್ಷದ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದ ನಲ್ಲಗುಟ್ಟ ಪಾಳ್ಯದಲ್ಲಿ ನಡೆದಿದೆ.
ಶಶಿಕಲಾ ಹಾಗೂ ಶ್ರೀನಿವಾಸ್ ದಂಪತಿಯ ಪುತ್ರ ವೇದೇಶ್(8) ಮೃತಪಟ್ಟ ಬಾಲಕ. ಮಗನಿಗೆ ನಾಟಿ ಔಷಧಿ ಕುಡಿಸಿದ ಶ್ರೀನಿವಾಸ್ ತಾನೂ ಕೂಡ ಕುಡಿದು ಮತ್ತೋರ್ವ ಪುತ್ರಿಗೂ ನೀಡಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ಎಲ್ಲರೂ ಅಸ್ವಸ್ಥಗೊಂಡಿದ್ದು ಕೂಡಲೇ ತಂದೆ-ಮಗಳು ಆಸ್ಪತ್ರೆ ಸೇರಿದರೆ 8 ವರ್ಷದ ಬಾಲಕ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಈ ವೇಳೆ ಮಗು ಹೊಟ್ಟೆ ಉರಿ ಎಂದು ಒದ್ದಾಡುತ್ತಿರುತ್ತದೆ. ಆಗ ನಾಟಿ ಔಷಧಿ ವೈದ್ಯನಿಗೆ ಕರೆ ಮಾಡಿದಾಗ, ಆ ಔಷಧಿ ಹಾಗೇ, ಸ್ವಲ್ಪ ಹೊತ್ತು ಹೋದರೆ ಎಲ್ಲಾ ಸರಿ ಹೋಗುತ್ತೆ ಎಂದು ಹೇಳುತ್ತಾನೆ. ಅಷ್ಟರ ವೇಳೆ ತಂದೆ ಮತ್ತು ಮಗಳಿಗೂ ಇದರ ಎಫೆಕ್ಟ್ ಕಾಣಿಸುತ್ತದೆ. ತಕ್ಷಣ ಚಿಕ್ಕಬಳ್ಳಾಪುರದ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರುತ್ತಾರೆ. ವೈದ್ಯರು ಚಿಕಿತ್ಸೆ ನೀಡಿದ ಕಾರಣ ತಂದೆ ಮತ್ತು ಮಗು ಪ್ರಾಣಾಪಾಯದಿಂದ ಪಾರಾಗುತ್ತಾರೆ. ಆದರೆ ಮೂರು ದಿನಗಳಿಂದ ಗಂಡು ಮಗು ವೇದೇಶ್ ಗೆ ನಾಟಿ ಔಷಧಿ ಕುಡಿಸಿದ್ದ ಕಾರಣ ಮಗು ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪುತ್ತಾನೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…