ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯೋತ್ಸವ: ಕೆಂಪೇಗೌಡರ ಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ನಿರ್ಮಾತೃ ಕೆಂಪೇಗೌಡರ 515 ನೇ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮವು ಬೆಂಗಳೂರು ನಗರದ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದ್ದು, ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳದಿಂದ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಜ್ಯೋತಿ ಕಳುಹಿಸುವ ಅಂಗವಾಗಿ ಗುರುವಾರದಂದು ನಾಡಪ್ರಭು ಕೆಂಪೇಗೌಡರ ಮೂಲಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಲ್ಲಿನ ಚನ್ನಕೇಶವ ದೇವಾಲಯದಿಂದ ಜ್ಯೋತಿ ಹೊರಡಿಸಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ರಥಯಾತ್ರೆಗೆ ಚಾಲನೆ ನೀಡಿದರು.

ಇದಕ್ಕೂ ಮುನ್ನ ಕೆಂಪೇಗೌಡರ ಪೂರ್ವಜರಾದ ರಣಭೈರೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ ನಂತರ ಚನ್ನಕೇಶವ ದೇವಸ್ಥಾನದಲ್ಲಿ ಸಚಿವರು ವಿಶೇಷ ಪೂಜೆಯನ್ನು ಸಲ್ಲಿಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಚಿವರಿಂದ ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಮರ್ಪಣೆ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ” ಅಂಗವಾಗಿ ಇಂದು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ “ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ”ಗೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

*ಜೂನ್ 29 ಕ್ಕೆ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ*

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವು ಜೂನ್ 29ರ ಶನಿವಾರದಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ(ಬಯಪ) ಅಧ್ಯಕ್ಷ ಶಾಂತಕುಮಾರ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿ.ಬಿ.ಎಂ.ಪಿ)ಯ ಯಲಹಂಕ ವಲಯದ ಆಯುಕ್ತರಾದ ಕರೀಗೌಡ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿ.ಪಂ ಉಪಕಾರ್ಯದರ್ಶಿ ರಮೇಶ್ ಟಿ.ಕೆ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರಾದ ಕೆ.ಸಿ ವೆಂಕಟೇಗೌಡ, ವಿವಿಧ ಸಂಘಟನೆಗಳ ಮುಖಂಡರು ಸೇರಿ ನೂರಾರು ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

28 minutes ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

7 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

8 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

21 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

21 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

1 day ago