ನಾಡಿನಾದ್ಯಂತ ಮನೆ ಮಾಡಿದ ಸುಗ್ಗಿ ಹಬ್ಬದ ಸಂಭ್ರಮ, ಸಡಗರ: ಕಬ್ಬು, ಎಳ್ಳು, ಬೆಲ್ಲ, ಸಕ್ಕರೆ ಅಚ್ಚು, ಹೂ, ಹಣ್ಣು, ಗೆಣಸು ಖರೀದಿ ಭರಾಟೆ ಜೋರು

ಹೊಸ ವರ್ಷದ ಮೊದಲ ಹಬ್ಬ ಸುಗ್ಗಿ ಹಬ್ಬ ಎಂದೇ ಕರೆಸಿಕೊಳ್ಳುವ ಮಕರ ಸಂಕ್ರಾಂತಿ ಹಬ್ಬದ ಸಡಗರ ಸಂಭ್ರಮ ನಾಡಿನಾದ್ಯಂತ ಮನೆಮಾಡಿದೆ.

ಈ ಹಬ್ಬಕ್ಕೆ ಪ್ರಮುಖವಾಗಿ ಬೇಕಾಗುವ ಕಬ್ಬು, ಎಳ್ಳು, ಬೆಲ್ಲ, ಸಕ್ಕರೆ ಅಚ್ಚು, ಹೂ, ಹಣ್ಣು ಖರೀದಿ ಭರಾಟೆ ನಗರದ ಮಾರುಕಟ್ಟೆಯಲ್ಲಿ ಜೋರಾಗಿದೆ.

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಜನ ಜಂಗುಳಿ ಹೆಚ್ಚಾಗಿತ್ತು. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ದರ ಸ್ವಲ್ಪ ಹೆಚ್ಚಾಗಿದೆ. ಹೂ, ಹಣ್ಣು ಮಾರುಕಟ್ಟೆಗೆ ಹೆಚ್ಚಾಗಿ ಬಂದಿದೆ. ಕಬ್ಬಂತೂ ಎಂದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನಗರದಲ್ಲಿ ಕಾಣಿಸಿಕೊಂಡಿದೆ.

ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಬ್ಬು ಜಲ್ಲೆ, ಹೂ, ಹಣ್ಣುಗಳ ಮಾರಾಟ ಭರದಿಂದ ಸಾಗಿದೆ. ಅಂಗಡಿಗಳಲ್ಲಿ ಸಿದ್ಧಪಡಿಸಿದ ಎಳ್ಳು-ಬೆಲ್ಲ, ಸಕ್ಕರೆ ಅಚ್ಚುಗಳ ಖರೀದಿಯೂ ಜೋರಾಗಿದೆ.

ವಿವಿಧ ದರಗಳಲ್ಲಿ ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡಲಾಗುತ್ತಿದೆ. ಸಾಮಾನ್ಯ ಕಬ್ಬು‌ ಜಳವೆಗೆ 60ರಿಂದ 70 ರೂ. ವವರೆಗೆ ಮಾರಾಟವಾಗುತ್ತಿದೆ.

ಈ ಹಬ್ಬದಲ್ಲಿ ಹೆಚ್ಚಾಗಿ ಬಳಸುವ ಕಡಲೇಕಾಯಿ ಕೆ.ಜಿಗೆ ₹100, ಎಳ್ಳು ಬೆಲ್ಲ ಕೆ.ಜಿಗೆ ₹200, ಗೆಣಸು ₹60, ಕಬ್ಬು ಒಂದು ಜಳವೆಗೆ ₹60, ಅವರೆ ಕಾಯಿ ಒಂದು ಕೆ.ಜಿಗೆ ₹80 ಇದ್ದು ಬೆಲೆಗಳು ಹಬ್ಬಕ್ಕಾಗಿ ಹೆಚ್ಚಿವೆ.

ಕಾಕಡ ಹೂವು 1 ಕೆ.ಜಿಗೆ ₹800, ಮಲ್ಲಿಗೆ ₹2,000, ಕನಕಾಂಬರ 1 ಕೆ.ಜಿಗೆ ₹1,600 ಇದ್ದರೆ, ಚೆಂಡು ₹80, ಸೇವಂತಿಗೆ, ಗುಲಾಬಿ ಮತ್ತಿತರೆ ಹೂವಿನ ಬೆಲೆಗಳು ಒಂದು ಕೆ.ಜಿಗೆ ₹250 ರವರೆಗೂ ಇವೆ.

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

20 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

1 hour ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

10 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago