ನಾಡಿನಾದ್ಯಂತ ಮನೆ ಮಾಡಿದ ಸುಗ್ಗಿ ಹಬ್ಬದ ಸಂಭ್ರಮ, ಸಡಗರ: ಕಬ್ಬು, ಎಳ್ಳು, ಬೆಲ್ಲ, ಸಕ್ಕರೆ ಅಚ್ಚು, ಹೂ, ಹಣ್ಣು, ಗೆಣಸು ಖರೀದಿ ಭರಾಟೆ ಜೋರು

ಹೊಸ ವರ್ಷದ ಮೊದಲ ಹಬ್ಬ ಸುಗ್ಗಿ ಹಬ್ಬ ಎಂದೇ ಕರೆಸಿಕೊಳ್ಳುವ ಮಕರ ಸಂಕ್ರಾಂತಿ ಹಬ್ಬದ ಸಡಗರ ಸಂಭ್ರಮ ನಾಡಿನಾದ್ಯಂತ ಮನೆಮಾಡಿದೆ.

ಈ ಹಬ್ಬಕ್ಕೆ ಪ್ರಮುಖವಾಗಿ ಬೇಕಾಗುವ ಕಬ್ಬು, ಎಳ್ಳು, ಬೆಲ್ಲ, ಸಕ್ಕರೆ ಅಚ್ಚು, ಹೂ, ಹಣ್ಣು ಖರೀದಿ ಭರಾಟೆ ನಗರದ ಮಾರುಕಟ್ಟೆಯಲ್ಲಿ ಜೋರಾಗಿದೆ.

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಜನ ಜಂಗುಳಿ ಹೆಚ್ಚಾಗಿತ್ತು. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ದರ ಸ್ವಲ್ಪ ಹೆಚ್ಚಾಗಿದೆ. ಹೂ, ಹಣ್ಣು ಮಾರುಕಟ್ಟೆಗೆ ಹೆಚ್ಚಾಗಿ ಬಂದಿದೆ. ಕಬ್ಬಂತೂ ಎಂದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನಗರದಲ್ಲಿ ಕಾಣಿಸಿಕೊಂಡಿದೆ.

ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಬ್ಬು ಜಲ್ಲೆ, ಹೂ, ಹಣ್ಣುಗಳ ಮಾರಾಟ ಭರದಿಂದ ಸಾಗಿದೆ. ಅಂಗಡಿಗಳಲ್ಲಿ ಸಿದ್ಧಪಡಿಸಿದ ಎಳ್ಳು-ಬೆಲ್ಲ, ಸಕ್ಕರೆ ಅಚ್ಚುಗಳ ಖರೀದಿಯೂ ಜೋರಾಗಿದೆ.

ವಿವಿಧ ದರಗಳಲ್ಲಿ ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡಲಾಗುತ್ತಿದೆ. ಸಾಮಾನ್ಯ ಕಬ್ಬು‌ ಜಳವೆಗೆ 60ರಿಂದ 70 ರೂ. ವವರೆಗೆ ಮಾರಾಟವಾಗುತ್ತಿದೆ.

ಈ ಹಬ್ಬದಲ್ಲಿ ಹೆಚ್ಚಾಗಿ ಬಳಸುವ ಕಡಲೇಕಾಯಿ ಕೆ.ಜಿಗೆ ₹100, ಎಳ್ಳು ಬೆಲ್ಲ ಕೆ.ಜಿಗೆ ₹200, ಗೆಣಸು ₹60, ಕಬ್ಬು ಒಂದು ಜಳವೆಗೆ ₹60, ಅವರೆ ಕಾಯಿ ಒಂದು ಕೆ.ಜಿಗೆ ₹80 ಇದ್ದು ಬೆಲೆಗಳು ಹಬ್ಬಕ್ಕಾಗಿ ಹೆಚ್ಚಿವೆ.

ಕಾಕಡ ಹೂವು 1 ಕೆ.ಜಿಗೆ ₹800, ಮಲ್ಲಿಗೆ ₹2,000, ಕನಕಾಂಬರ 1 ಕೆ.ಜಿಗೆ ₹1,600 ಇದ್ದರೆ, ಚೆಂಡು ₹80, ಸೇವಂತಿಗೆ, ಗುಲಾಬಿ ಮತ್ತಿತರೆ ಹೂವಿನ ಬೆಲೆಗಳು ಒಂದು ಕೆ.ಜಿಗೆ ₹250 ರವರೆಗೂ ಇವೆ.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

6 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

8 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

8 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

8 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

10 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

14 hours ago