ನಾಡಿನಾದ್ಯಂತ ಮನೆ ಮಾಡಿದ ಸುಗ್ಗಿ ಹಬ್ಬದ ಸಂಭ್ರಮ, ಸಡಗರ: ಕಬ್ಬು, ಎಳ್ಳು, ಬೆಲ್ಲ, ಸಕ್ಕರೆ ಅಚ್ಚು, ಹೂ, ಹಣ್ಣು, ಗೆಣಸು ಖರೀದಿ ಭರಾಟೆ ಜೋರು

ಹೊಸ ವರ್ಷದ ಮೊದಲ ಹಬ್ಬ ಸುಗ್ಗಿ ಹಬ್ಬ ಎಂದೇ ಕರೆಸಿಕೊಳ್ಳುವ ಮಕರ ಸಂಕ್ರಾಂತಿ ಹಬ್ಬದ ಸಡಗರ ಸಂಭ್ರಮ ನಾಡಿನಾದ್ಯಂತ ಮನೆಮಾಡಿದೆ.

ಈ ಹಬ್ಬಕ್ಕೆ ಪ್ರಮುಖವಾಗಿ ಬೇಕಾಗುವ ಕಬ್ಬು, ಎಳ್ಳು, ಬೆಲ್ಲ, ಸಕ್ಕರೆ ಅಚ್ಚು, ಹೂ, ಹಣ್ಣು ಖರೀದಿ ಭರಾಟೆ ನಗರದ ಮಾರುಕಟ್ಟೆಯಲ್ಲಿ ಜೋರಾಗಿದೆ.

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಜನ ಜಂಗುಳಿ ಹೆಚ್ಚಾಗಿತ್ತು. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ದರ ಸ್ವಲ್ಪ ಹೆಚ್ಚಾಗಿದೆ. ಹೂ, ಹಣ್ಣು ಮಾರುಕಟ್ಟೆಗೆ ಹೆಚ್ಚಾಗಿ ಬಂದಿದೆ. ಕಬ್ಬಂತೂ ಎಂದಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನಗರದಲ್ಲಿ ಕಾಣಿಸಿಕೊಂಡಿದೆ.

ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಸುಗ್ಗಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಬ್ಬು ಜಲ್ಲೆ, ಹೂ, ಹಣ್ಣುಗಳ ಮಾರಾಟ ಭರದಿಂದ ಸಾಗಿದೆ. ಅಂಗಡಿಗಳಲ್ಲಿ ಸಿದ್ಧಪಡಿಸಿದ ಎಳ್ಳು-ಬೆಲ್ಲ, ಸಕ್ಕರೆ ಅಚ್ಚುಗಳ ಖರೀದಿಯೂ ಜೋರಾಗಿದೆ.

ವಿವಿಧ ದರಗಳಲ್ಲಿ ರಸ್ತೆ ಬದಿಗಳಲ್ಲಿ ವ್ಯಾಪಾರ ಮಾಡಲಾಗುತ್ತಿದೆ. ಸಾಮಾನ್ಯ ಕಬ್ಬು‌ ಜಳವೆಗೆ 60ರಿಂದ 70 ರೂ. ವವರೆಗೆ ಮಾರಾಟವಾಗುತ್ತಿದೆ.

ಈ ಹಬ್ಬದಲ್ಲಿ ಹೆಚ್ಚಾಗಿ ಬಳಸುವ ಕಡಲೇಕಾಯಿ ಕೆ.ಜಿಗೆ ₹100, ಎಳ್ಳು ಬೆಲ್ಲ ಕೆ.ಜಿಗೆ ₹200, ಗೆಣಸು ₹60, ಕಬ್ಬು ಒಂದು ಜಳವೆಗೆ ₹60, ಅವರೆ ಕಾಯಿ ಒಂದು ಕೆ.ಜಿಗೆ ₹80 ಇದ್ದು ಬೆಲೆಗಳು ಹಬ್ಬಕ್ಕಾಗಿ ಹೆಚ್ಚಿವೆ.

ಕಾಕಡ ಹೂವು 1 ಕೆ.ಜಿಗೆ ₹800, ಮಲ್ಲಿಗೆ ₹2,000, ಕನಕಾಂಬರ 1 ಕೆ.ಜಿಗೆ ₹1,600 ಇದ್ದರೆ, ಚೆಂಡು ₹80, ಸೇವಂತಿಗೆ, ಗುಲಾಬಿ ಮತ್ತಿತರೆ ಹೂವಿನ ಬೆಲೆಗಳು ಒಂದು ಕೆ.ಜಿಗೆ ₹250 ರವರೆಗೂ ಇವೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

15 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago