ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು ಮುಂಜಾನೆಯಿಂದಲೇ ಮನೆಗಳಲ್ಲಿ ಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲು ಜನ ಮುಂದಾಗುತ್ತಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದಂದು, ಮುತ್ತೈದೆಯರಿಗೆ ಅರಿಶಿನ-ಕುಂಕುಮ ನೀಡುವುದರ ಜೊತೆಗೆ, ಹಸಿರು ಬಳೆಗಳನ್ನು ನೀಡುವುದು ವಾಡಿಕೆಯಾಗಿದೆ. ಹಸಿರು ಬಣ್ಣವು ಸಮೃದ್ಧಿ, ಸಂತೋಷ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ. ಈ ಹಬ್ಬದಲ್ಲಿ, ಮುತ್ತೈದೆಯರು ಅರಿಶಿನ-ಕುಂಕುಮ ಮತ್ತು ಬಳೆಗಳನ್ನು ಸ್ವೀಕರಿಸುವ ಮೂಲಕ, ಲಕ್ಷ್ಮೀ ದೇವಿಯ ಆಶೀರ್ವಾದ ಮತ್ತು ಸೌಭಾಗ್ಯವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.
ವರಮಹಾಲಕ್ಷ್ಮಿ ಪೂಜೆಯ ಶುಭ ಮುಹೂರ್ತ ಹೀಗಿದೆ….
ಸಿಂಹ ಲಗ್ನ ಪೂಜೆ ಮುಹೂರ್ತ: ಮುಂಜಾನೆ 06:29 ರಿಂದ ಬೆಳಗ್ಗೆ 08:46ರವರೆಗೆ. ಮುಂಜಾನೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 17 ನಿಮಿಷಗಳು. ಮಧ್ಯಾಹ್ನ ಪೂಜೆಗೆ ಶುಭ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41. ಮಧ್ಯಾಹ್ನ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 19 ನಿಮಿಷ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಸಂಜೆ 7:27 ರಿಂದ ರಾತ್ರಿ 8:54 ರವರೆಗೆ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 1 ಗಂಟೆ 27 ನಿಮಿಷ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಆಗಸ್ಟ್ 8ರಂದು ರಾತ್ರಿ 11:55 ರಿಂದ ಆಗಸ್ಟ್ 9ರಂದು ಮುಂಜಾನೆ 01:50 ರವರೆಗೆ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಅವಧಿ: ಗಂಟೆ 56 ನಿಮಿಷ.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…