ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು ಮುಂಜಾನೆಯಿಂದಲೇ ಮನೆಗಳಲ್ಲಿ ಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲು ಜನ ಮುಂದಾಗುತ್ತಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದಂದು, ಮುತ್ತೈದೆಯರಿಗೆ ಅರಿಶಿನ-ಕುಂಕುಮ ನೀಡುವುದರ ಜೊತೆಗೆ, ಹಸಿರು ಬಳೆಗಳನ್ನು ನೀಡುವುದು ವಾಡಿಕೆಯಾಗಿದೆ. ಹಸಿರು ಬಣ್ಣವು ಸಮೃದ್ಧಿ, ಸಂತೋಷ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ. ಈ ಹಬ್ಬದಲ್ಲಿ, ಮುತ್ತೈದೆಯರು ಅರಿಶಿನ-ಕುಂಕುಮ ಮತ್ತು ಬಳೆಗಳನ್ನು ಸ್ವೀಕರಿಸುವ ಮೂಲಕ, ಲಕ್ಷ್ಮೀ ದೇವಿಯ ಆಶೀರ್ವಾದ ಮತ್ತು ಸೌಭಾಗ್ಯವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.
ವರಮಹಾಲಕ್ಷ್ಮಿ ಪೂಜೆಯ ಶುಭ ಮುಹೂರ್ತ ಹೀಗಿದೆ….
ಸಿಂಹ ಲಗ್ನ ಪೂಜೆ ಮುಹೂರ್ತ: ಮುಂಜಾನೆ 06:29 ರಿಂದ ಬೆಳಗ್ಗೆ 08:46ರವರೆಗೆ. ಮುಂಜಾನೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 17 ನಿಮಿಷಗಳು. ಮಧ್ಯಾಹ್ನ ಪೂಜೆಗೆ ಶುಭ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41. ಮಧ್ಯಾಹ್ನ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 19 ನಿಮಿಷ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಸಂಜೆ 7:27 ರಿಂದ ರಾತ್ರಿ 8:54 ರವರೆಗೆ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 1 ಗಂಟೆ 27 ನಿಮಿಷ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಆಗಸ್ಟ್ 8ರಂದು ರಾತ್ರಿ 11:55 ರಿಂದ ಆಗಸ್ಟ್ 9ರಂದು ಮುಂಜಾನೆ 01:50 ರವರೆಗೆ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಅವಧಿ: ಗಂಟೆ 56 ನಿಮಿಷ.
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…