ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಮುತ್ತೈದೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆ ನೀಡುವುದು ವಾಡಿಕೆ

ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು ಮುಂಜಾನೆಯಿಂದಲೇ ಮನೆಗಳಲ್ಲಿ ಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲು ಜನ ಮುಂದಾಗುತ್ತಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದಂದು, ಮುತ್ತೈದೆಯರಿಗೆ ಅರಿಶಿನ-ಕುಂಕುಮ ನೀಡುವುದರ ಜೊತೆಗೆ, ಹಸಿರು ಬಳೆಗಳನ್ನು ನೀಡುವುದು ವಾಡಿಕೆಯಾಗಿದೆ. ಹಸಿರು ಬಣ್ಣವು ಸಮೃದ್ಧಿ, ಸಂತೋಷ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ. ಈ ಹಬ್ಬದಲ್ಲಿ, ಮುತ್ತೈದೆಯರು ಅರಿಶಿನ-ಕುಂಕುಮ ಮತ್ತು ಬಳೆಗಳನ್ನು ಸ್ವೀಕರಿಸುವ ಮೂಲಕ, ಲಕ್ಷ್ಮೀ ದೇವಿಯ ಆಶೀರ್ವಾದ ಮತ್ತು ಸೌಭಾಗ್ಯವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.

ವರಮಹಾಲಕ್ಷ್ಮಿ ಪೂಜೆಯ ಶುಭ ಮುಹೂರ್ತ ಹೀಗಿದೆ….

ಸಿಂಹ ಲಗ್ನ ಪೂಜೆ ಮುಹೂರ್ತ: ಮುಂಜಾನೆ 06:29 ರಿಂದ ಬೆಳಗ್ಗೆ 08:46ರವರೆಗೆ. ಮುಂಜಾನೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 17 ನಿಮಿಷಗಳು. ಮಧ್ಯಾಹ್ನ ಪೂಜೆಗೆ ಶುಭ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41. ಮಧ್ಯಾಹ್ನ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 19 ನಿಮಿಷ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಸಂಜೆ 7:27 ರಿಂದ ರಾತ್ರಿ 8:54 ರವರೆಗೆ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 1 ಗಂಟೆ 27 ನಿಮಿಷ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಆಗಸ್ಟ್‌ 8ರಂದು ರಾತ್ರಿ 11:55 ರಿಂದ ಆಗಸ್ಟ್‌ 9ರಂದು ಮುಂಜಾನೆ 01:50 ರವರೆಗೆ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಅವಧಿ: ಗಂಟೆ 56 ನಿಮಿಷ.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

7 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

8 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

10 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

11 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

11 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

12 hours ago