ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಮುತ್ತೈದೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆ ನೀಡುವುದು ವಾಡಿಕೆ

ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು ಮುಂಜಾನೆಯಿಂದಲೇ ಮನೆಗಳಲ್ಲಿ ಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲು ಜನ ಮುಂದಾಗುತ್ತಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದಂದು, ಮುತ್ತೈದೆಯರಿಗೆ ಅರಿಶಿನ-ಕುಂಕುಮ ನೀಡುವುದರ ಜೊತೆಗೆ, ಹಸಿರು ಬಳೆಗಳನ್ನು ನೀಡುವುದು ವಾಡಿಕೆಯಾಗಿದೆ. ಹಸಿರು ಬಣ್ಣವು ಸಮೃದ್ಧಿ, ಸಂತೋಷ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ. ಈ ಹಬ್ಬದಲ್ಲಿ, ಮುತ್ತೈದೆಯರು ಅರಿಶಿನ-ಕುಂಕುಮ ಮತ್ತು ಬಳೆಗಳನ್ನು ಸ್ವೀಕರಿಸುವ ಮೂಲಕ, ಲಕ್ಷ್ಮೀ ದೇವಿಯ ಆಶೀರ್ವಾದ ಮತ್ತು ಸೌಭಾಗ್ಯವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.

ವರಮಹಾಲಕ್ಷ್ಮಿ ಪೂಜೆಯ ಶುಭ ಮುಹೂರ್ತ ಹೀಗಿದೆ….

ಸಿಂಹ ಲಗ್ನ ಪೂಜೆ ಮುಹೂರ್ತ: ಮುಂಜಾನೆ 06:29 ರಿಂದ ಬೆಳಗ್ಗೆ 08:46ರವರೆಗೆ. ಮುಂಜಾನೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 17 ನಿಮಿಷಗಳು. ಮಧ್ಯಾಹ್ನ ಪೂಜೆಗೆ ಶುಭ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41. ಮಧ್ಯಾಹ್ನ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 19 ನಿಮಿಷ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಸಂಜೆ 7:27 ರಿಂದ ರಾತ್ರಿ 8:54 ರವರೆಗೆ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 1 ಗಂಟೆ 27 ನಿಮಿಷ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಆಗಸ್ಟ್‌ 8ರಂದು ರಾತ್ರಿ 11:55 ರಿಂದ ಆಗಸ್ಟ್‌ 9ರಂದು ಮುಂಜಾನೆ 01:50 ರವರೆಗೆ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಅವಧಿ: ಗಂಟೆ 56 ನಿಮಿಷ.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

2 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

6 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

8 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

19 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

20 hours ago