ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು ಮುಂಜಾನೆಯಿಂದಲೇ ಮನೆಗಳಲ್ಲಿ ಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲು ಜನ ಮುಂದಾಗುತ್ತಿದ್ದಾರೆ.
ವರಮಹಾಲಕ್ಷ್ಮಿ ಹಬ್ಬದಂದು, ಮುತ್ತೈದೆಯರಿಗೆ ಅರಿಶಿನ-ಕುಂಕುಮ ನೀಡುವುದರ ಜೊತೆಗೆ, ಹಸಿರು ಬಳೆಗಳನ್ನು ನೀಡುವುದು ವಾಡಿಕೆಯಾಗಿದೆ. ಹಸಿರು ಬಣ್ಣವು ಸಮೃದ್ಧಿ, ಸಂತೋಷ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ. ಈ ಹಬ್ಬದಲ್ಲಿ, ಮುತ್ತೈದೆಯರು ಅರಿಶಿನ-ಕುಂಕುಮ ಮತ್ತು ಬಳೆಗಳನ್ನು ಸ್ವೀಕರಿಸುವ ಮೂಲಕ, ಲಕ್ಷ್ಮೀ ದೇವಿಯ ಆಶೀರ್ವಾದ ಮತ್ತು ಸೌಭಾಗ್ಯವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.
ವರಮಹಾಲಕ್ಷ್ಮಿ ಪೂಜೆಯ ಶುಭ ಮುಹೂರ್ತ ಹೀಗಿದೆ….
ಸಿಂಹ ಲಗ್ನ ಪೂಜೆ ಮುಹೂರ್ತ: ಮುಂಜಾನೆ 06:29 ರಿಂದ ಬೆಳಗ್ಗೆ 08:46ರವರೆಗೆ. ಮುಂಜಾನೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 17 ನಿಮಿಷಗಳು. ಮಧ್ಯಾಹ್ನ ಪೂಜೆಗೆ ಶುಭ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41. ಮಧ್ಯಾಹ್ನ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 19 ನಿಮಿಷ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಸಂಜೆ 7:27 ರಿಂದ ರಾತ್ರಿ 8:54 ರವರೆಗೆ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 1 ಗಂಟೆ 27 ನಿಮಿಷ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಆಗಸ್ಟ್ 8ರಂದು ರಾತ್ರಿ 11:55 ರಿಂದ ಆಗಸ್ಟ್ 9ರಂದು ಮುಂಜಾನೆ 01:50 ರವರೆಗೆ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಅವಧಿ: ಗಂಟೆ 56 ನಿಮಿಷ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…