ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಮುತ್ತೈದೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆ ನೀಡುವುದು ವಾಡಿಕೆ

ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ಇಂದು ನಾಡಿನಾದ್ಯಂತ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇಂದು ಮುಂಜಾನೆಯಿಂದಲೇ ಮನೆಗಳಲ್ಲಿ ಮಹಾಲಕ್ಷ್ಮಿಯನ್ನು ಪ್ರತಿಷ್ಠಾಪಿಸಿ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲು ಜನ ಮುಂದಾಗುತ್ತಿದ್ದಾರೆ.

ವರಮಹಾಲಕ್ಷ್ಮಿ ಹಬ್ಬದಂದು, ಮುತ್ತೈದೆಯರಿಗೆ ಅರಿಶಿನ-ಕುಂಕುಮ ನೀಡುವುದರ ಜೊತೆಗೆ, ಹಸಿರು ಬಳೆಗಳನ್ನು ನೀಡುವುದು ವಾಡಿಕೆಯಾಗಿದೆ. ಹಸಿರು ಬಣ್ಣವು ಸಮೃದ್ಧಿ, ಸಂತೋಷ ಮತ್ತು ಹೊಸ ಆರಂಭಗಳ ಸಂಕೇತವಾಗಿದೆ. ಈ ಹಬ್ಬದಲ್ಲಿ, ಮುತ್ತೈದೆಯರು ಅರಿಶಿನ-ಕುಂಕುಮ ಮತ್ತು ಬಳೆಗಳನ್ನು ಸ್ವೀಕರಿಸುವ ಮೂಲಕ, ಲಕ್ಷ್ಮೀ ದೇವಿಯ ಆಶೀರ್ವಾದ ಮತ್ತು ಸೌಭಾಗ್ಯವನ್ನು ಪಡೆಯುತ್ತಾರೆ ಎಂದು ನಂಬಲಾಗಿದೆ.

ವರಮಹಾಲಕ್ಷ್ಮಿ ಪೂಜೆಯ ಶುಭ ಮುಹೂರ್ತ ಹೀಗಿದೆ….

ಸಿಂಹ ಲಗ್ನ ಪೂಜೆ ಮುಹೂರ್ತ: ಮುಂಜಾನೆ 06:29 ರಿಂದ ಬೆಳಗ್ಗೆ 08:46ರವರೆಗೆ. ಮುಂಜಾನೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 17 ನಿಮಿಷಗಳು. ಮಧ್ಯಾಹ್ನ ಪೂಜೆಗೆ ಶುಭ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41. ಮಧ್ಯಾಹ್ನ ಲಕ್ಷ್ಮಿ ಪೂಜೆಗೆ ಶುಭ ಅವಧಿ: 2 ಗಂಟೆ 19 ನಿಮಿಷ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಸಂಜೆ 7:27 ರಿಂದ ರಾತ್ರಿ 8:54 ರವರೆಗೆ. ಸಂಜೆ ಲಕ್ಷ್ಮಿ ಪೂಜೆಗೆ ಶುಭ ಅವಧಿ: 1 ಗಂಟೆ 27 ನಿಮಿಷ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಮುಹೂರ್ತ: ಆಗಸ್ಟ್‌ 8ರಂದು ರಾತ್ರಿ 11:55 ರಿಂದ ಆಗಸ್ಟ್‌ 9ರಂದು ಮುಂಜಾನೆ 01:50 ರವರೆಗೆ. ಮಧ್ಯರಾತ್ರಿ ಲಕ್ಷ್ಮಿ ಪೂಜೆಗೆ ಶುಭ ಅವಧಿ: ಗಂಟೆ 56 ನಿಮಿಷ.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

2 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

5 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

23 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago