ಇಂದು ನಾಡಿನೆಲ್ಲಡೆ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಸೋಮವಾರ ನಗರದ ಹಲವು ಶ್ರೀಕೃಷ್ಣ, ವಿಷ್ಣು ಮಂದಿರ ಹಾಗೂ ಮಠಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಕೃಷ್ಣ ಸೇರಿದಂತೆ ವಿವಿಧ ವೇಷಭೂಷಣ ಮಕ್ಕಳಿಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ದೇವಾಲಯಗಳಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ವಿವಿಧ ರೀತಿಯ ಪೂಜೆ ಪುನಸ್ಕಾರ ಸೇರಿದಂತೆ 108 ಬಗೆಯ ಖಾದ್ಯಗಳ ನೈವೇದ್ಯ ಏರ್ಪಡಿಸಲಾಗಿದೆ.
ಅದೇ ರೀತಿ ಕೋನಘಟ್ಟದ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇಸ್ಕಾನ್ ಶ್ರೀ ನರಸಿಂಹ ಗಿರಿಧಾರಿ ಮಂದಿರದ ವತಿಯಿಂದ ಭಾನುವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.
ಈ ವೇಳೆ ಶ್ರೀ ರಾಧಾಕೃಷ್ಣರ ವೇಷಭೂಷಣ ಸ್ಪರ್ಧೆಯಲ್ಲಿ ಪುಟಾಣಿಗಳು ಭಾಗವಹಿಸಿ ಎಲ್ಲರ ಕಣ್ಮನ ಸೆಳೆದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…