ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬ ಸಂಭ್ರಮ: ಬೆಸ್ತರಪೇಟೆಯಲ್ಲಿ ಕಣ್ಮನ ಸೆಳೆಯುತ್ತಿರುವ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ರೂಪದ ಗಣೇಶ ಮೂರ್ತಿ

ಇಂದು ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬವನ್ನು ಭಕ್ತಿಯಿಂದ ಸಡಗರ, ವಿಜೃಂಭಣೆ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆಮನೆಗಳಲ್ಲಿ, ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕ, ಗಣೇಶನ ವಿವಿಧ ರೂಪ, ಭಂಗಿಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಎಲ್ಲೆಡೆ ಗಣಪತಿಯ ಆರಾಧನೆ ಶ್ರದ್ಧೆ, ಭಕ್ತಿಯಿಂದ ನಡೆಯುತ್ತಿದೆ.

ದೊಡ್ಡಬಳ್ಳಾಪುರ ನಗರದ ಬೆಸ್ತರಪೇಟೆಯಲ್ಲಿ ವಿಶ್ವ ಹಿಂದು ಪರಿಷದ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡ ಸ್ವಾಮಿ ವಿವೇಕಾನಂದ ಘಟಕದ ವತಿಯಿಂದ 12‌ಅಡಿ ಎತ್ತರದ ಹಿಂದೂ‌ ಮಹಾಗಣಪತಿ(ಇಮ್ಮಡಿ ಪುಲಿಕೇಶಿ) ಮೂರ್ತಿಯನ್ನು ಪ್ರತಿಷ್ಟಾಪಿಸಿ ಪೂಜೆ ಪುನಸ್ಕಾರ ನೆರವೇರಿಸಲಾಗುತ್ತಿದೆ…

ಚಾಲುಕ್ಯ ವಂಶದ ಪ್ರಸಿದ್ಧ ರಾಜ ಇಮ್ಮಡಿ ಪುಲಿಕೇಶಿ ಲುಕ್‌ನಲ್ಲಿ ಗಣೇಶ ವಿಗ್ರಹ ಎಲ್ಲರ ಕಣ್ಮನ ಸೆಳೆಯುತ್ತಿದೆ.

ಪ್ರತಿ ವರ್ಷವೂ ಪುರಾತನ ಕಾಲದಿಂದಲೂ ನಾಡಿನ ಅಭಿವೃದ್ಧಿಗಾಗಿ, ಏಳಿಗೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ ದುಡಿದ ಮಹಾನ್ ಸಾಧಕರ ಕುರಿತು ಇಂದಿನ ಪೀಳಿಗೆಗೆ ತಿಳಿಸಿಕೊಡುವ ಉದ್ದೇಶದಿಂದ ಅವರನ್ನು ಹೋಲುವ (ಶೈಲಿ) ಗಣೇಶ ಮೂರ್ತಿಗಳನ್ನು ತಯಾರಿಸಿ ಗಣೇಶ ಹಬ್ಬದಂದು ಪ್ರತಿಷ್ಟಾಪಿಸಿ‌ ಪೂಜಿಸಲಾಗುತ್ತದೆ ಎಂದು ವಿಶ್ವ ಹಿಂದು ಪರಿಷದ್ವ ಬಜರಂಗದಳ ನಗರ ಕಾರ್ಯದರ್ಶಿ ಉಮೇಶ್ ತಿಳಿಸಿದರು.

ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಇತಿಹಾಸ…

ಇಮ್ಮಡಿ ಪುಲಿಕೇಶಿಯು (ಕ್ರಿ.ಶ. 610-642) ಚಾಲುಕ್ಯ ವಂಶದ ಪ್ರಸಿದ್ಧ ದೊರೆ. ಅವನು ದಖನ್ ಪ್ರಸ್ಥಭೂಮಿಯಲ್ಲಿ ಬೃಹತ್ ಸಾಮ್ರಾಜ್ಯವನ್ನು ಸ್ಥಾಪಿಸಿದನು ಮತ್ತು ಹರ್ಷವರ್ಧನನನ್ನು ಸೋಲಿಸಿ ದಕ್ಷಿಣಾಪಥೇಶ್ವರ ಎಂಬ ಬಿರುದನ್ನು ಪಡೆದನು. ಅವನ ಆಡಳಿತದಲ್ಲಿ ಚಾಲುಕ್ಯ ಸಾಮ್ರಾಜ್ಯವು ಉಚ್ಛ್ರಾಯ ಸ್ಥಿತಿಯನ್ನು ತಲುಪಿತು.

ಚಿಕ್ಕಂದಿನಿಂದಲೂ ಹೋರಾಟದ ಜೀವನ ನಡೆಸಿದ ಪುಲಿಕೇಶಿ ತನ್ನ ರಾಜ್ಯವನ್ನು ವಿಸ್ತರಿಸಿದ. ಉತ್ತರ ಭಾರತವನ್ನು ವಶಪಡಿಸಿಕೊಳ್ಳು ಇಂಗಿತ ಇತ್ತು. ಆದರೆ ಹರ್ಷವರ್ಧನನೇ ಯುದ್ಧ ಸಾರಿದಾಗ ಪುಲಿಕೇಶಿ ಎದುರು ಸೋತು ಸಂಧಿ ಮಾಡಿಕೊಂಡಿದ್ದ.

Ramesh Babu

Journalist

Recent Posts

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

1 hour ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

6 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

7 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

8 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

18 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

19 hours ago