ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬ ಸಂಭ್ರಮ: ಬೆಸ್ತರಪೇಟೆಯಲ್ಲಿ ಕಣ್ಮನ ಸೆಳೆಯುತ್ತಿರುವ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ರೂಪದ ಗಣೇಶ ಮೂರ್ತಿ

ಇಂದು ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬವನ್ನು ಭಕ್ತಿಯಿಂದ ಸಡಗರ, ವಿಜೃಂಭಣೆ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆಮನೆಗಳಲ್ಲಿ, ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ ವಾಹನ, ಮೋದಕ ಪ್ರಿಯ, ವಿನಾಯಕ, ಗಣೇಶನ ವಿವಿಧ ರೂಪ, ಭಂಗಿಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಎಲ್ಲೆಡೆ ಗಣಪತಿಯ ಆರಾಧನೆ ಶ್ರದ್ಧೆ, ಭಕ್ತಿಯಿಂದ ನಡೆಯುತ್ತಿದೆ.

ದೊಡ್ಡಬಳ್ಳಾಪುರ ನಗರದ ಬೆಸ್ತರಪೇಟೆಯಲ್ಲಿ ವಿಶ್ವ ಹಿಂದು ಪರಿಷದ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡ ಸ್ವಾಮಿ ವಿವೇಕಾನಂದ ಘಟಕದ ವತಿಯಿಂದ 12‌ಅಡಿ ಎತ್ತರದ ಹಿಂದೂ‌ ಮಹಾಗಣಪತಿ(ಇಮ್ಮಡಿ ಪುಲಿಕೇಶಿ) ಮೂರ್ತಿಯನ್ನು ಪ್ರತಿಷ್ಟಾಪಿಸಿ ಪೂಜೆ ಪುನಸ್ಕಾರ ನೆರವೇರಿಸಲಾಗುತ್ತಿದೆ…

ಚಾಲುಕ್ಯ ವಂಶದ ಪ್ರಸಿದ್ಧ ರಾಜ ಇಮ್ಮಡಿ ಪುಲಿಕೇಶಿ ಲುಕ್‌ನಲ್ಲಿ ಗಣೇಶ ವಿಗ್ರಹ ಎಲ್ಲರ ಕಣ್ಮನ ಸೆಳೆಯುತ್ತಿದೆ.

ಪ್ರತಿ ವರ್ಷವೂ ಪುರಾತನ ಕಾಲದಿಂದಲೂ ನಾಡಿನ ಅಭಿವೃದ್ಧಿಗಾಗಿ, ಏಳಿಗೆಗಾಗಿ, ಸಮ ಸಮಾಜ ನಿರ್ಮಾಣಕ್ಕಾಗಿ ದುಡಿದ ಮಹಾನ್ ಸಾಧಕರ ಕುರಿತು ಇಂದಿನ ಪೀಳಿಗೆಗೆ ತಿಳಿಸಿಕೊಡುವ ಉದ್ದೇಶದಿಂದ ಅವರನ್ನು ಹೋಲುವ (ಶೈಲಿ) ಗಣೇಶ ಮೂರ್ತಿಗಳನ್ನು ತಯಾರಿಸಿ ಗಣೇಶ ಹಬ್ಬದಂದು ಪ್ರತಿಷ್ಟಾಪಿಸಿ‌ ಪೂಜಿಸಲಾಗುತ್ತದೆ ಎಂದು ವಿಶ್ವ ಹಿಂದು ಪರಿಷದ್ವ ಬಜರಂಗದಳ ನಗರ ಕಾರ್ಯದರ್ಶಿ ಉಮೇಶ್ ತಿಳಿಸಿದರು.

ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಇತಿಹಾಸ…

ಇಮ್ಮಡಿ ಪುಲಿಕೇಶಿಯು (ಕ್ರಿ.ಶ. 610-642) ಚಾಲುಕ್ಯ ವಂಶದ ಪ್ರಸಿದ್ಧ ದೊರೆ. ಅವನು ದಖನ್ ಪ್ರಸ್ಥಭೂಮಿಯಲ್ಲಿ ಬೃಹತ್ ಸಾಮ್ರಾಜ್ಯವನ್ನು ಸ್ಥಾಪಿಸಿದನು ಮತ್ತು ಹರ್ಷವರ್ಧನನನ್ನು ಸೋಲಿಸಿ ದಕ್ಷಿಣಾಪಥೇಶ್ವರ ಎಂಬ ಬಿರುದನ್ನು ಪಡೆದನು. ಅವನ ಆಡಳಿತದಲ್ಲಿ ಚಾಲುಕ್ಯ ಸಾಮ್ರಾಜ್ಯವು ಉಚ್ಛ್ರಾಯ ಸ್ಥಿತಿಯನ್ನು ತಲುಪಿತು.

ಚಿಕ್ಕಂದಿನಿಂದಲೂ ಹೋರಾಟದ ಜೀವನ ನಡೆಸಿದ ಪುಲಿಕೇಶಿ ತನ್ನ ರಾಜ್ಯವನ್ನು ವಿಸ್ತರಿಸಿದ. ಉತ್ತರ ಭಾರತವನ್ನು ವಶಪಡಿಸಿಕೊಳ್ಳು ಇಂಗಿತ ಇತ್ತು. ಆದರೆ ಹರ್ಷವರ್ಧನನೇ ಯುದ್ಧ ಸಾರಿದಾಗ ಪುಲಿಕೇಶಿ ಎದುರು ಸೋತು ಸಂಧಿ ಮಾಡಿಕೊಂಡಿದ್ದ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 hour ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

2 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

4 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

11 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago